Breaking News

ಸಚಿವ ಮುನಿಯಪ್ಪಗು ‘ಸಿಎಂ’ ಸ್ಥಾನ ಸಿಗಲಿ : ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ ಆಗ್ರಹ

Spread the love

ಬೆಂಗಳೂರು : ಯಾವಾಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಕುರಿತು ಆರೋಪ ಕೇಳಿ ಬಂದಿತೊ, ಆಗಲೇ ಕಾಂಗ್ರೆಸ್ಸಿನ ಹಲವು ನಾಯಕರು ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದರು. ಅಲ್ಲದೆ, ಗೃಹ ಸಚಿವ ಜಿ ಪರಮೇಶ್ವರ್, ಸತೀಶ್ ಜಾರಕಿಹೊಳಿ ಸೇರಿದಂತೆ ಹಲವರ ಹೆಸರು ಕೇಳಿ ಬಂದಿತು.

ಇದೀಗ ಸಚಿವ ಕೆ ಹೆಚ್ ಮುನಿಯಪ್ಪ ಅವರಿಗೂ ಸಿಎಂ ಸ್ಥಾನ ಸಿಗಲಿ ಎಂದು ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಆಗ್ರಹಿಸಿದ್ದಾರೆ.

ರಾಜ್ಯ ಮಾದಿಗ ಪ್ರಾಧ್ಯಾಪಕರ ವೇದಿಕೆ ಆಯೋಜಿಸಿದ್ದ ಒಳ ಮೀಸಲಾತಿ ಚಿಂತನ ಮಂಥನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿಯನ್ನು ಸರ್ಕಾರ ಜಾರಿಗೆ ತರಬೇಕು. ಮುಖ್ಯಮಂತ್ರಿ ಹುದ್ದೆಯನ್ನು ನಮ್ಮ ಸಮುದಾಯದವರಿಗೆ ನೀಡಬೇಕು. ನಾಲ್ಕು ದಶಕಗಳಿಂದ ಪಕ್ಷಕ್ಕೆ ನಿಷ್ಠವಾಗಿರುವ ಕೆ.ಎಚ್.ಮುನಿಯಪ್ಪ ಅವರು ಸಿಎಂ ಆಗಲಿ ಎಂದು ಮಾದಾರ ಶ್ರೀಗಳು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

Spread the loveನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ