ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ಅಲ್ಪಾವಧಿ ಕೃಷಿ ಸಾಲದ ಮಿತಿ ಹೆಚ್ಚಿಸುವಂತೆ ಮನವಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, 2024-25ರ ಆರ್ಥಿಕ ವರ್ಷದಲ್ಲಿ ಅಲ್ಪಾವಧಿ ಕೃಷಿ ಸಾಲಗಳ (ಎಸ್ಎಒ) ಮಿತಿಯನ್ನು ಹೆಚ್ಚಿಸುವಂತೆ ಒತ್ತಾಯಿಸಿದರು.
ನಬಾರ್ಡ್ನ ಕೃಷಿ ಸಾಲವನ್ನು ಶೇ.58 ಕಡಿತ ಮಾಡಿರುವುದರಿಂದ ರಾಜ್ಯದ ರೈತರಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ, ಹಾಗಾಗಿ ಈ ಸಾಲದ ಮಿತಿಯನ್ನು ಹೆಚ್ಚಿಸಿ ರೈತರ ಹಿತಕಾಯುವಂತೆ ಮನವಿ ಮಾಡಿದ್ದಾರೆ, ಈ ಸಂದರ್ಭದಲ್ಲಿ ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.
ಈ ಮೊದಲು ದೆಹಲಿ ಭೇಟಿ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ, ‘ನಬಾರ್ಡ್ ಕಳೆದ ವರ್ಷ ರಾಜ್ಯಕ್ಕೆ ₹5,600 ಕೋಟಿ ಸಾಲ ನೀಡಿತ್ತು. ಈ ವರ್ಷ 2,340 ಕೋಟಿಗೆ ಕಡಿತ ಮಾಡಿದೆ. ಈ ಬಗ್ಗೆ ಕೇಂದ್ರ ವಿತ್ತ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಲಾಗುವುದು’ ಎಂದಿದ್ದರು. 2024-25ರಲ್ಲಿ 35 ಲಕ್ಷ ರೈತರಿಗೆ 25,000 ಕೋಟಿ ರೂಪಾಯಿಗಳ ಅಲ್ಪಾವಧಿಯ ಕೃಷಿ ಸಾಲವನ್ನು ವಿತರಿಸುವ ಗುರಿಯನ್ನು ಕರ್ನಾಟಕ ಹೊಂದಿದೆ ಎಂದು ಒತ್ತಿ ಹೇಳಿದರು. 2023-24ರಲ್ಲಿ ರಾಜ್ಯವು ಸಹಕಾರಿ ಸಾಲ ರಚನೆಯ ಮೂಲಕ ಈಗಾಗಲೇ 22,902 ಕೋಟಿ ರೂ. ಸಾಲ ನೀಡಿದೆ
Laxmi News 24×7