Breaking News

ನವೆಂಬರ್ 26ರಂದು ಭಾರತೀಯ ನಾಗರೀಕರಿಗೆ ವಿಶೇಷ ದಿನವಾದ ಹಿನ್ನೆಲೆಯಲ್ಲಿ, ಮಾನ್ವಿ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಲೋಯೋಲಾ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಸಂವಿಧಾನ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ

Spread the love

ನವೆಂಬರ್ 26ರಂದು ಭಾರತೀಯ ನಾಗರೀಕರಿಗೆ ವಿಶೇಷ ದಿನವಾದ ಹಿನ್ನೆಲೆಯಲ್ಲಿ, ಮಾನ್ವಿ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಲೋಯೋಲಾ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಸಂವಿಧಾನ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ

ಎಂದು ವಕೀಲ ಯಲ್ಲಪ್ಪ ಬಾದರದಿನ್ನಿ ತಿಳಿಸಿದರು.

ಇಂದು ಮಾನ್ವಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್ ಬರೆದ ಸಂವಿಧಾನದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದೆ ನಮ್ಮ ಗುರಿ ಎಂದರು.

ಅಂದು ನಡೆಯುವ

ಕಾರ್ಯಕ್ರಮದಲ್ಲಿ ಬಹುಜನ ಚಿಂತಕ ದಾವಣಗೆರೆ ವಿಜಯಬಾಬು ಪಾಟೇಲ್ ಸೇರಿದಂತೆ ರಾಜಕೀಯ ಗಣ್ಯರು ಹಾಗು ಶಾಲಾ ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಜಗತ್ತಿನ ಅತಿದೊಡ್ಡ ಲಿಖಿತ ಸಂವಿಧಾನವನ್ನು ನಮ್ಮ ಸಂಸತ್ತಿನಲ್ಲಿ ಅಂಗೀಕರಿಸಿದ ದಿನವಾದ ಹಿನ್ನೆಲೆಯಲ್ಲಿ ನಾವೆಲ್ಲರೂ ವಿಶೇಷವಾಗಿ ಸಂವಿಧಾನ ಸಮರ್ಪಣಾ ದಿನವನ್ನು ಸಂಭ್ರಮದಿಂದ ಆಚರಿಸೋಣ ಎಂದರು.

ಈ ಸಂದರ್ಭದಲ್ಲಿ ದಲಿತ ಪ್ರಗತಿಪರ ಒಕ್ಕೂಟದ ಮುಖಂಡರಾದ ರವೀಂದ್ರ ಜಾನೆಕಲ್ ,ತಿಪ್ಪಣ್ಣ ಬಾಗಲವಾಡ ,ಪಿ.ರವಿಕುಮಾರ್ ,

ಪ್ರಭುರಾಜ್ ಕೊಡ್ಲಿ, ಬಸವರಾಜ ನಕ್ಕುಂದಿ ,ಚಂದ್ರಶೇಖರ್ ನಾಯಕ ,ಮಾರೆಪ್ಪಅರವಿ,
ಸೇರಿದಂತೆ ಮುಖಂಡರು ಇದ್ದರು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ