ಬಿಪಿಎಲ್ ಕಾರ್ಡುದಾರರಿಗೆ ಗುಡ್ನ್ಯೂಸ್! ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಡಿಸೆಂಬರ್ನಿಂದ ಸಿಗಲಿದೆ ರೇಷನ್
ಬೆಂಗಳೂರು, ನವೆಂಬರ್ 27: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಬಿಪಿಎಲ್ ಕಾರ್ಡ್ ರದ್ದಾಗಿದ್ದಕ್ಕೆ ಮತ್ತು ಬಿಪಿಎಲ್ ಇದ್ದಿದ್ದನ್ನು ಎಪಿಎಲ್ಗೆ ಸೇರಿಸಿದ್ದಕ್ಕೆ ಜನರಿಂದ ಸರ್ಕಾರದ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು. ಸಾರ್ವಜನಿಕರ ವಿರೋಧದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಪಡಿತರ ಚೀಟಿ ಪರಿಷ್ಕರಣೆ ಕೈಬಿಟ್ಟಿತ್ತು. ಅಷ್ಟೇ ಅಲ್ಲದೆ, ಅರ್ಹತೆ ಇದ್ದರೂ ಬಿಪಿಎಲ್ ಕಾರ್ಡ್ನಿಂದ ವಂಚಿತರಾಗಿದ್ದವರಿಗೆ ಮರು ಪರಶೀಲನೆ ಭರವಸೆ ನೀಡಿತ್ತು. ಇದರಂತೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಆಹಾರ ಇಲಾಖೆ ಬಿಪಿಎಲ್ ಕಾರ್ಡ್ ಮರು ಪರಶೀಲನೆ ಮಾಡುತ್ತಿದೆ. ಅರ್ಹ ಫಲಾನುಭವಿಗಳ ಕಾರ್ಡ್ಗಳನ್ನು ಮತ್ತೆ ನೀಡಲು ಸರ್ಕಾರ ಮುಂದಾಗಿದೆ. ಆಧಾರ್, ಪ್ಯಾನ್ ಕಾರ್ಡ್, ಐಟಿ ರಶೀದಿ ಮುಂತಾದ ದಾಖಲೆಗಳ ಮೂಲಕ ಅರ್ಹತೆ ಪಡೆದವರು ಕಾರ್ಡ್ಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಿದೆ.