Breaking News

ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ

Spread the love

ಬಾಗಲಕೋಟೆ: ನೇಕಾರರಿಗೆ ನಿವೇಶನ, ನೂರಾರು ಜನ ನೇಕಾರರಿಗೆ ಸಿಟಿಎಸ್ ಪಹಣಿ, 55 ವರ್ಷ ಮೇಲ್ಪಟ್ಟ ನೇಕಾರರಿಗೆ 5 ಸಾವಿರ ಮಾಸಾಶನ ನೀಡಲಾಗಿದೆ. ಕೆಹೆಚ್​ಡಿಸಿಯಲ್ಲಿ ನಡೆದ ಅವ್ಯವಹಾರದ ಸಮಗ್ರ ತನಿಖೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ‌‌ ಮಾಡಲಾಗಿದೆ. ರಬಕವಿಬನಹಟ್ಟಿ ನಗರದ ಬಾಂಗಿ ಸರ್ಕಲ್ ನಲ್ಲಿ ನೇಕಾರರ ಪ್ರತಿಭಟನೆ ನಡೆಸಲಾಗಿದೆ.

ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದಿಂದ ಹೋರಾಟ‌ ನಡೆಸಲಾಗಿದೆ. ಇಂದು ಎಂಟನೇ ದಿನಕ್ಕೆ ಹೋರಾಟ ತಲುಪಿದೆ. ಯಾವುದೇ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಇಂದು ರಸ್ತೆ ಮೇಲೆ ಅಡುಗೆ ಮಾಡಿ ಊಟ ಮಾಡುವ ಮೂಲಕ ಧರಣಿ ನಡೆಸಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಲಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ