Breaking News

ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ

Spread the love

ಬಾಗಲಕೋಟೆ: ನೇಕಾರರಿಗೆ ನಿವೇಶನ, ನೂರಾರು ಜನ ನೇಕಾರರಿಗೆ ಸಿಟಿಎಸ್ ಪಹಣಿ, 55 ವರ್ಷ ಮೇಲ್ಪಟ್ಟ ನೇಕಾರರಿಗೆ 5 ಸಾವಿರ ಮಾಸಾಶನ ನೀಡಲಾಗಿದೆ. ಕೆಹೆಚ್​ಡಿಸಿಯಲ್ಲಿ ನಡೆದ ಅವ್ಯವಹಾರದ ಸಮಗ್ರ ತನಿಖೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ‌‌ ಮಾಡಲಾಗಿದೆ. ರಬಕವಿಬನಹಟ್ಟಿ ನಗರದ ಬಾಂಗಿ ಸರ್ಕಲ್ ನಲ್ಲಿ ನೇಕಾರರ ಪ್ರತಿಭಟನೆ ನಡೆಸಲಾಗಿದೆ.

ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದಿಂದ ಹೋರಾಟ‌ ನಡೆಸಲಾಗಿದೆ. ಇಂದು ಎಂಟನೇ ದಿನಕ್ಕೆ ಹೋರಾಟ ತಲುಪಿದೆ. ಯಾವುದೇ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಇಂದು ರಸ್ತೆ ಮೇಲೆ ಅಡುಗೆ ಮಾಡಿ ಊಟ ಮಾಡುವ ಮೂಲಕ ಧರಣಿ ನಡೆಸಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ