Breaking News

ಬಾಂಗ್ಲಾದವರಿಗೆ ನಕಲಿ ಆಧಾರ್ ಕಾರ್ಡ್‌ ಮಾಡಿಕೊಡುತ್ತಿದ್ದ ಆರೋಪಿ ಬಂಧನ

Spread the love

ನವೆಂಬರ್​ 29: ಬಾಂಗ್ಲಾದೇಶದಿಂದ (Bangladesh) ಅಕ್ರಮವಾಗಿ ಭಾರತದೊಳಗೆ ನುಸುಳಿ ಬಂದಿದ್ದವರಿಗೆ ನಕಲಿ ಗರುತಿನ ಚೀಟಿ (Fake Documents) ಮಾಡಿಕೊಡುತ್ತಿದ್ದ ಆರೋಪಿಯನ್ನು ಸೂರ್ಯಸಿಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರ್ನಾಬ್ ಮಂಡಲ್ ಬಂಧಿತ ಆರೋಪಿ. ಆರೋಪಿ ಅರ್ನಾಬ್ ಮಂಡಲ್ ಮೂಲತಃ ಪಶ್ಚಿಮ ಬಂಗಾಳದವನು. ಈ ಬೆಂಗಳೂರು ಹೊರವಲಯದ ಸೂರ್ಯಸಿಟಿ ಬಳಿ ಸೈಬರ್​ ಸೆಂಟರ್ ತೆರೆದಿದ್ದನು.

ಕರ್ನಾಟಕ ಪೊಲೀಸರು ರಾಜ್ಯದಲ್ಲಿ ಅಕ್ರಮವಾಗಿ ನೆಲಸಿರುವ ಬಾಂಗ್ಲಾದೇಶ ಪ್ರಜೆಗಳ ಬೆನ್ನಬಿದ್ದಿದ್ದಾರೆ. ಈಗಾಗಲೆ ಅನೇಕರ ಹೆಡೆಮುರಿ ಕಟ್ಟುತ್ತಿದ್ದಾರೆ. ಈ ಎಲ್ಲ ಬಾಂಗ್ಲಾದೇಶ ಪ್ರಜೆಗಳ ಬಳಿ ಭಾರತದ ನಕಲಿ ಗುರುತಿನ ಚೀಟಿಗಳು ಪತ್ತೆಯಾಗಿದ್ದವು. ಮತ್ತು ಈ ಎಲ್ಲ ನಕಲಿ ಗುರುತಿನ ಚೀಟಿಗಳು ಪಶ್ಚಿಮ ಬಂಗಾಳ ವಿಳಾಸದ್ದಾಗಿವೆ.

ಈ ಬಗ್ಗೆ ಪೊಲೀಸರಿಗೆ ಅನುಮಾನ ವ್ಯಕ್ತವಾಗಿ, ತನಿಖೆ ಆರಂಭಿಸಿದಾಗ, ಆರೋಪಿ ಅರ್ನಾಬ್​ ಮಂಡಲ್​ ಸೈಬರ್​ ಸೆಂಟರ್​ನಲ್ಲಿ ನಡೆಯುತ್ತಿರುವ ಅಕ್ರಮ ದಂಧೆ ಬಗ್ಗೆ ತಿಳಿದಿದೆ. ಖಚಿತ ಮಾಹಿತಿ ಪಡೆದುಕೊಂಡ ಪೊಲೀಸರು ಗುರುವಾರ ಸೈಬರ್​ ಸೆಂಟರ್​ ಮೇಲೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಸಾಕಷ್ಟು ನಕಲಿ ಆಧಾರ್​ ಕಾರ್ಡ್​ ಪತ್ತೆಯಾಗಿವೆ. ಹಾಗೆಯೇ 18 ಮನೆಗಳ ಬಾಡಿಗೆ ಅಗ್ರಿಮೆಂಟ್​​ ಪತ್ತೆಯಾಗಿವೆ.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ