Breaking News

ದಸರಾ ವರೆಗೂ ಶಾಲಾ ಕಾಲೇಜಿಗೆ ರಜೆ..

Spread the love

ಬೆಂಗಳೂರು,ಜೂ.22- ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆ ಹಾಗೂ ಸಾವಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ದಸರಾವರೆಗೂ ಶಾಲಾಕಾಲೇಜುಗಳನ್ನು ತೆರೆಯದಿರಲು ಸರ್ಕಾರ ತೀರ್ಮಾನಿಸಿದೆ.

ದಸರಾ ಹಬ್ಬ ಮುಗಿದ ನಂತರವೇ ಪದವಿ,ಪದವಿಪೂರ್ವ, ಪ್ರೌಢಶಾಲೆ, ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳನ್ನು ಪರಿಸ್ಥಿತಿಗನುಗುಣವಾಗಿ ಆರಂಭಿಸುವುದು ಹಾಗೂ ನರ್ಸರಿ ಶಾಲೆಗಳನ್ನು ಜನವರಿವರೆಗೂ ತೆರೆಯದಂತೆ ಶಾಲಾ ಆಡಳಿತ ಮಂಡಳಿಗಳಿಗೆ ಸದ್ಯದಲ್ಲೇ ಅಧಿಸೂಚನೆ ಹೊರಡಿಸಲಿದೆ

ಸರ್ಕಾರಿ, ಅನುದಾನ ಹಾಗೂ ಅನುದಾನರಹಿತ ಶಾಲೆಗಳು 2020-21ನೇ ಸಾಲಿನ ಮೊದಲಾರ್ಧದ ಶೈಕ್ಷಣಿಕ ಅವಧಿಯನ್ನು ಪ್ರಾರಂಭಿಸದೆ ಸರ್ಕಾರದ ಸೂಚನೆ ಬರುವವರೆಗೂ ತೆರೆಯಬಾರದೆಂಬ ಸೂಚನೆ ಕೊಡಲಿದೆ. ಸದ್ಯ 1ರಿಂದ 5ನೇ ತರಗತಿವರೆಗೆ ಮಾತ್ರ ಆನ್‍ಲೈನ್ ಶಿಕ್ಷಣವನ್ನು ರದ್ದುಪಡಿಸಲಾಗಿದ್ದು, 6ರಿಂದ ಉಳಿದ ತರಗತಿಗಳನ್ನು ಸಾಧ್ಯವಾದಷ್ಟು ಆನ್‍ಲೈನ್‍ನಲ್ಲೇ ನಡೆಸಲು ಸರ್ಕಾರ ಆದೇಶ ಮಾಡಲಿದೆ


Spread the love

About Laxminews 24x7

Check Also

ಬೆಂಗಳೂರಲ್ಲಿ ಇಂದು ಐಪಿಎಲ್‌ ಉದ್ಘಾಟನೆ – ಚಿನ್ನಸ್ವಾಮಿ‌ ಕ್ರೀಡಾಂಗಣಕ್ಕೆ 2,000 ಪೊಲೀಸರ ಭದ್ರತೆ

Spread the loveಬೆಂಗಳೂರು: ಬರೋಬ್ಬರಿ 18 ವರ್ಷ ಬಳಿಕ ಇಂಡಿಯನ್‌ ಪ್ರೀಮಿಯರ್‌ ಲೀಗ್  ಉದ್ಘಾಟನಾ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ