Breaking News

ಬೆಳಗಾವಿ ಜಿಲ್ಲಾ ಆಸ್ಪತ್ರೆ ಮತ್ತು ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬಾಣಂತಿ ಮತ್ತು ಶಿಸುವಿನ ಸಾವಿನ ಸಂಖ್ಯೆ ಕಳೆದ 3 ವರ್ಷಗಳನ್ನು ಗಮನಿಸಿದಾಗ 2022ರಲ್ಲೇ ಅತ್ಯಧಿಕ ಎನ್ನುವುದು ಬೆಳಕಿಗೆ ಬಂದಿದೆ.

Spread the love

, ಬೆಳಗಾವಿ ಜಿಲ್ಲಾ ಆಸ್ಪತ್ರೆ ಮತ್ತು ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬಾಣಂತಿ ಮತ್ತು ಶಿಸುವಿನ ಸಾವಿನ ಸಂಖ್ಯೆ ಕಳೆದ 3 ವರ್ಷಗಳನ್ನು ಗಮನಿಸಿದಾಗ 2022ರಲ್ಲೇ ಅತ್ಯಧಿಕ ಎನ್ನುವುದು ಬೆಳಕಿಗೆ ಬಂದಿದೆ.

2022ರಲ್ಲಿ ಬಿಮ್ಸ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 6,878 ಹೆರಿಗೆಗಳಾಗಿದ್ದು, ಬಿಮ್ಸ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಲಾ 12ರಂತೆ ಒಟ್ಟೂ 24 ಬಾಣಂತಿಯರು ಸಾವಿಗೀಡಾಗಿದ್ದಾರೆ.

2023ರಲ್ಲಿ 7,951 ಹೆರಿಗೆಯಾಗಿದ್ದು, ಬಿಮ್ಸ್ ನಲ್ಲಿ 7 ಹಾಗೂ ಪಿಎಚ್ ಸಿ ಗಳಲ್ಲಿ 6 ಸೇರಿದಂತೆ ಒಟ್ಟೂ 13 ಮಹಿಳೆಯರು ಸಾವಿಗೀಡಾಗಿದ್ದಾರೆ.

 

 

2024ರಲ್ಲಿ 6,961 ಹೆರಿಗೆಗಳಗಾದ್ದು, ಬಿಮ್ಸ್ ನಲ್ಲಿ 6 ಹಾಗೂ ಪಿಎಚ್ಸಿ ಗಳಲ್ಲಿ 2 ಸೇರಿ ಒಟ್ಟೂ 8 ಬಾಣಂತಿಯರು ಸಾವಿಗೀಡಾಗಿದ್ದಾರೆ.

ಅಂದರೆ, ಕಳೆದ 2 ವರ್ಷಗಳ ಒಟ್ಟೂ ಸಂಖ್ಯೆಗಿಂತ 2022ರಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಸಾವಿಗೀಡಾದ ಬಾಣಂತಿಯರ ಸಂಖ್ಯೆ ಹೆಚ್ಚಾಗಿದೆ.

ಶಿಶುಗಳ ಸಾವಿನ ಸಂಖ್ಯೆ

ಶಿಶುಗಳ ಸಾವಿನ ಸಂಖ್ಯೆ ಕೂಡ ಕಳೆದ 7 ವರ್ಷಗಳಲ್ಲೇ ಬಿಜೆಪಿ ಸರಕಾರದ ಅವಧಿಯ, 2022ರಲ್ಲಿ ಅತ್ಯಧಿಕವಾಗಿದೆ. 2022ರಲ್ಲಿ ಶೇ.16.27ರಷ್ಟು ಶಿಶುವಿನ ಮರಣ ಪ್ರಮಾಣ ದಾಖಲಾಗಿದೆ. ಅಂದರೆ 2022ರಲ್ಲಿ 384 ಶಿಶುಗಳು ಮರಣಪಟ್ಟಿವೆ.

2023ರಲ್ಲಿ ಒಟ್ಟೂ 159 ಶಿಶುಗಳು ಸಾವಿಗೀಡಾಗಿದ್ದು, ಮರಣ ಪ್ರಮನಾಣ ಶೇ. 5.10 ದಾಖಲಾಗಿದೆ. ಇದು ಕಳೆದ 7 ವರ್ಷಗಳಲ್ಲೇ ಅತ್ಯಂತ ಕಡಿಮೆಯಾಗಿದೆ. 2024ರಲ್ಲಿ 188 ಶಿಶುಗಳು ಸಾವಿಗೀಡಾಗಿದ್ದು ಶೇಕಡಾವಾರು 7.79 ಆಗಿದೆ. ಇದು ಕಳೆದ 7 ವರ್ಷಗಳಲ್ಲಿ ಎರಡನೇ ಕನಿಷ್ಟ ಪ್ರಮಾಣವಾಗಿದೆ.

 

 

ವಾಸ್ತವಿಕ ಮಾಹಿತಿ ಪಡೆಯದೆ ಪ್ರಸ್ತುತ ಕಾಂಗ್ರೆಸ್ ಸರಕಾರದ ವಿರುದ್ದ ಆರೋಪಗಳನ್ನು ಮಾಡಲು ಹೋಗಿ ಬಿಜೆಪಿ ಈಗ ಮುಖಭಂಗಕ್ಕೀಡಾಗಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲಾ ಆಸ್ಪತ್ರೆಗಳಲ್ಲಿ ಬಾಣಂತಿ ಹಾಗೂ ಶಿಶುವಿನ ಸಾವಿನ ಪ್ರಕರಣವನ್ನು ಎತ್ತುವ ಮೂಲಕ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿದೆ. ಆದರೆ ವಾಸ್ತವಾಂಶಗಳು ಬಿಜೆಪಿಗೆ ಪ್ರತಿಕೂಲವಾಗಿರುವುದು ಈಗ ಬಯಲಾಗಿದೆ.

ಬಿಜೆಪಿ ಹಗ್ಗ ಕೊಟ್ಟು ತನ್ನ ಕೈಯನ್ನು ತಾನೇ ಕಟ್ಟಿಸಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪದೆ ಪದೆ ಹೇಳುತ್ತಿರುವುದು ಈಗ ಬೆಳಗಾವಿಯ ಬಾಣಂತಿ ಮತ್ತು ಶಿಶುವಿನ ಸಾವಿನ ವಿಷಯದಲ್ಲೂ ನಿಜವಾಗಿದೆ.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ