Breaking News

ರಾಜ್ಯದ ಚುಕ್ಕಾಣಿ ಹಿಡಿಯಲು ನಾನು ಸಬಲನಿದ್ದೇನೆ.:ಉಮೇಶ್ ಕತ್ತಿ…………

Spread the love

ಬೆಳಗಾವಿ/ಚಿಕ್ಕೋಡಿ: ರಾಜ್ಯದ ಚುಕ್ಕಾಣಿ ಹಿಡಿಯಲು ನಾನು ಸಬಲನಿದ್ದೇನೆ ಎಂದು ಹೇಳುವ ಮೂಲಕ ಶಾಸಕ ಉಮೇಶ್ ಕತ್ತಿ ಮತ್ತೆ ಮುಖ್ಯಮಂತ್ರಿ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಹುಕ್ಕೇರಿ ಪಟ್ಟಣದಲ್ಲಿ ಕೊರೊನಾ ವಾರಿಯರ್ಸ್ ಗೆ ಕಿಟ್ ವಿತರಣೆ ಸಮಾರಂಭದಲ್ಲಿ ಶಾಸಕ ಉಮೇಶ್ ಕತ್ತಿ ಭಾಗಿಯಾಗಿದ್ದರು. ಸಮಾರಂಭದ ವೇದಿಕೆಯಲ್ಲಿಯೇ ಸಿಎಂ ಆಗೋ ಆಸೆಯನ್ನು ಹೊರ ಹಾಕಿದ್ದಾರೆ. ಒಟ್ಟು ಎಂಟು ಬಾರಿ ಶಾಸಕನಾಗಿದ್ದೇನೆ. ಹಾಗೆ ರಾಜ್ಯದ ಚುಕ್ಕಾಣಿ ಹಿಡಿಯಲು ನಾನು ಸಬಲನಿದ್ದೇನೆ. ಉತ್ತರ ಕರ್ನಾಟಕದ ಸುಪುತ್ರ ರಾಜ್ಯದ ಮುಖ್ಯಮಂತ್ರಿ ಆಗಿ ಬರಲಿ ಎನ್ನುವ ಹಾರೈಕೆ ನಿಮ್ಮದಾಗಿರಲಿ ಎಂದು ಹೇಳಿದರು.

ವಿಶ್ವರಾಜ ಕತ್ತಿ ಟ್ರಸ್ಟ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಿಸಲಾಯಿತು. ಈ ಹಿಂದೆಯೂ ಹಲವು ಬಾರಿ ಉಮೇಶ್ ಕತ್ತಿ ಸಿಎಂ ಪಟ್ಟಕ್ಕೇರುವ ಇಂಗಿತ ವ್ಯಕ್ತಪಡಿಸಿದ್ದರು. ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮುರುಗೇಶ್ ನಿರಾಣಿ ಜೊತೆ ಸೇರಿ ಉತ್ತರ ಕರ್ನಾಟಕ ಭಾಗದ ಶಾಸಕರ ಬಣ ರಚಿಸುತ್ತಿದ್ದಾರೆ ಎನ್ನಲಾಗುತ್ತಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ