ಬಿಜೆಪಿ ಮುಖಂಡನೊಬ್ಬನ ಕರ್ಮಕಾಂಡ ಬಯಲು.
ಈತ ಖಾನಾಪುರದ ಬಿಜೆಪಿ ಮುಖಂಡ ಹಾಗೂ ಶಾಸಕರ ಆಪ್ತ ಆಕಾಶ ಅಥಣಿಕರ್.

ಸಾರ್ವಜನಿಕರಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಖೊಟ್ಟಿ ನೌಕರಿ ಆದೇಶ ಪತ್ರಗಳನ್ನು ತಯಾರಿಸಿ ಕೊಟ್ಟು ಜನರನ್ನು ಯಾಮಾರಿಸುವುದೇ ಈ ಮಹಾನುಭಾವನ ಕಾಯಕ.
ಖಾನಾಪುರ ತಾಲ್ಲೂಕಿನ ಶ್ರೀಮತಿ ಶೀತಲ ಪಾಟೀಲ ಎಂಬ ಮಹಿಳೆಗೆ ಅಂಗನವಾಡಿ ಕಾರ್ಯಕರ್ತೆಯ ನೌಕರಿ ಕೊಡಿಸುವುದಾಗಿ ನಂಬಿಸಿ ಆಕೆಯಿಂದ 30000/- ಹಣ ಪಡೆದುಕೊಂಡು ಖೊಟ್ಟಿ ಆದೇಶ ಪ್ರತಿಯನ್ನು ತಯಾರಿಸಿ ಕೊಟ್ಟಿದ್ದು ಆ ಮಹಿಳೆ ನೀಡಿದ ದೂರಿನನ್ವಯ ಈತನ ಮೇಲೆ 420 ಪ್ರಕರಣ ದಾಖಲಾಗಿದೆ.
ಬಿಜೆಪಿಯ ಕಾನೂನು ಪ್ರಕೋಷ್ಟದ ಸಂಚಾಲಕನಾಗಿರುವ ಈತ ಇನ್ನೂ ಅದೆಷ್ಟು ಜನರನ್ನು ಯಾಮಾರಿಸಿದ್ದಾನೋ ದೇವ್ರೇ ಬಲ್ಲ.
Laxmi News 24×7