Breaking News

ಮದ್ಯಪಾನ ಮಾಡಿ ಆಸ್ಪತ್ರೆಗೆ ಬಂದಿದ್ದ ವೈದ್ಯಾಧಿಕಾರಿ ಅಮಾನತು

Spread the love

ಬಳ್ಳಾರಿ, ಡಿಸೆಂಬರ್​ 13: ಮದ್ಯಪಾನ (Alcohol) ಮಾಡಿ ಆಸ್ಪತ್ರೆಗೆ (Hospital) ಬರುತ್ತಿದ್ದ ಸಿರಗುಪ್ಪ (Siraguppa) ತಾಲೂಕು ವೈದ್ಯಾಧಿಕಾರಿ ಈರಣ್ಣ ಅವರನ್ನು ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ವೈದ್ಯ ಈರಣ್ಣ ಅವರು ಆಸ್ಪತ್ರೆಗೆ ಕುಡಿದು ಬಂದು ಸಿಬ್ಬಂದಿ ಮತ್ತು ಸಾರ್ವಜನಿಕರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದರು. ಪ್ರಸಾರ ಮಾಡಿತ್ತು.

ಬಳ್ಳಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯ ಈರಣ್ಣ ವಿರುದ್ಧ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿತ್ತು. ಸೂಚನೆ ಮೇರೆಗೆ ತನಿಖೆ ನಡೆಸಿದ ಜಿಲ್ಲಾ ಆರೋಗ್ಯ ಅಧಿಕಾರಿಗಳು, ಇಲಾಖೆಗೆ ವರದಿ ಸಲ್ಲಿಸಿದರು.ವರದಿಯಲ್ಲಿ ವೈದ್ಯ ಈರಣ್ಣ ಮದ್ಯಪಾನ ಮಾಡಿ ಆಸ್ಪತ್ರೆಗೆ ಬಂದು ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ, ವೈದ್ಯ ಈರಣ್ಣ ಕರ್ತವ್ಯ ಲೋಪ ಹಾಗೂ ದುರ್ನಡತೆಯ ಆಧಾರದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ