Breaking News

ನಾವು ಯಾರ ಪರವೂ ಇಲ್ಲ, ಯಾರ ವಿರುದ್ಧವೂ ಇಲ್ಲ” ಎಂದು ಶಾಸಕ ಬಿಜೆಪಿ ರಮೇಶ್ ಜಾರಕಿಹೊಳಿ

Spread the love

ಬೆಳಗಾವಿ: “ನಾವು ಯಾರ ಪರವೂ ಇಲ್ಲ, ಯಾರ ವಿರುದ್ಧವೂ ಇಲ್ಲ” ಎಂದು ಶಾಸಕ ಬಿಜೆಪಿ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಸುವರ್ಣ ಸೌಧದಲ್ಲಿಂದು ಮಾತನಾಡಿದ ಅವರು, ದೆಹಲಿ ಹೈಕಮಾಂಡ್ ನಾಯಕರ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿ, “ಮೊದಲ ಹಂತದ ಹೋರಾಟದ ವರದಿ ನೀಡಿದ್ದೇವೆ. ಜೆಪಿಸಿ ಸಮಿತಿಗೂ ವರದಿ ನೀಡಿದ್ದೇವೆ. ಯತ್ನಾಳ್​ ಶೋಕಾಸ್ ನೋಟಿಸ್​ಗೆ ಉತ್ತರ ಕೊಟ್ಟಿದ್ದಾರೆ. ಇದನ್ನು ಬಿಟ್ಟು ಬೇರೆ ಏನಿಲ್ಲ” ಎಂದರು.

ವಿಜಯೇಂದ್ರ ಪರ ಮಾಜಿ ಶಾಸಕರ ಸಭೆ ವಿಚಾರವಾಗಿ ಪ್ರತಿಕ್ರಿಯಿಸಿ, “ಆ ಹೋರಾಟದಲ್ಲಿ ಇರುವವರ ಫೋಟೊಗಳನ್ನು ನೋಡಿ. 12 ಜನ ಮಾಜಿ ಶಾಸಕರಿದ್ದಾರೆ. ಅಧ್ಯಕ್ಷರಿದ್ದಾರೆ ಅನ್ನುವ ಕಾರಣಕ್ಕೆ ಅವರೆಲ್ಲಾ ಹೋಗಿದ್ದಾರೆ. ಅಧ್ಯಕ್ಷರು ಹೋರಾಟಕ್ಕೆ ಹೋಗಿ ಅಂತ ಹೇಳಿದ್ದಕ್ಕೆ ಹೋಗಿದ್ದಾರೆ” ಎಂದು ಹೇಳಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ