Breaking News

ನೂತನ ಜಯದೇವ ಆಸ್ಪತ್ರೆ ಕಲಬುರಗಿಯಲ್ಲಿ ಉದ್ಘಾಟನೆ ನಡೆಸಿದ ಸಿದ್ದರಾಮಯ್ಯ !

Spread the love

ಕಲಬುರಗಿ : ನಗರದ ಡಾ. ಎಸ್​.ಎಂ ಪಂಡಿತ್​ ರಂಗಮಂದಿರದ ಎದುರಿನ ಏಳು ಎಕರೆ ಪ್ರದೇಶದಲ್ಲಿ ನಿರ್ಮಿಸಿರುವ ಜಯದೇವ ಹೃದ್ರೋಗ ವಿಜ್ಙನ ಮತ್ತು ಸಂಶೋಧನ ಸಂಸ್ಥೆಯ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ್​ ಖರ್ಗೆ ಉದ್ಘಾಟಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಡಿ,ಕೆ ಶಿವಕುಮಾರ್​ ಗೈರಾಗಿದ್ದರು.

ಹೃದ್ರೋಗ ಆಸ್ಪತ್ರೆಯನ್ನು ಉದ್ಘಾಟಿಸುವ ಮುನ್ನ ಸಿದ್ದರಾಮಯ್ಯ, ಆಸ್ಪತ್ರೆಯ ನೀಲಿ ನಕಾಶೆಯನ್ನು ವಿಕ್ಷೀಸದರು. ಆಸ್ಪತ್ರೆಯನ್ನು ವಿಕ್ಷೀಸಿದ ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರೊಂದಿಗೆ ಸೇರಿ ಆಸ್ಪತ್ರೆಯನ್ನು ಉದ್ಘಾಟಿಸಿದರು. ಒಟ್ಟು 371 ಬೆಡ್​ ಸಾಮರ್ಥ್ಯವಿರುವ ನೂತನ ಜಯದೇವ ಆಸ್ಪತ್ರೆಯನ್ನು ಉದ್ಘಾಟನೆ ಮಾಡಿದರು.

ಆಸ್ಪತ್ರೆ ಬೆಡ್​ ಸಾಮಾರ್ಥ್ಯ 371 ಏಕೆ !

ಸಂವಿಧಾನದ ಅನುಚ್ಚೇದ 371ಜೆ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಷೇಶ ಅನುದಾನ ನೀಡಲಾಗುತ್ತಿದ್ದು. ಅದರ ಅನುದಾನದಲ್ಲಿ ಜಯದೇವ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಅದರ ಜೊತೆಗೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಅನುಚ್ಚೇದ 371 ನೀಡಿದ 10ನೇ ವರ್ಷದ ಸವಿ ನೆನಪಿಗಾಗಿ ಆಸ್ಪತ್ರೆ ಬೆಡ್​ ಸಾಮರ್ಥ್ಯವನ್ನು 371 ಇಡಲಾಗಿದೆ. ಈ ಜಯದೇವ ಹೃದ್ರೋಗ ಆಸ್ಪತ್ರೆ ರಾಜ್ಯದ ಮೂರನೇ ಹೃದಯ ಆಸ್ಪತ್ರೆ ಎಂಬ ಕೀರ್ತಿಗೆ ಕಾರಣವಾಗಿದೆ.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ