Breaking News

ಕೆಎಸ್‌ಆರ್‌ಪಿ ಕಾನ್ಸ್‌ಸ್ಟೇಬಲ್ ಬಸ್ಸಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ

Spread the love

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದೆ. ಅದರಲ್ಲೂ ಇತ್ತೀಚೆಗೆ ಪೊಲೀಸರಿಗೆ ಕೊರೊನಾ ವಕ್ಕರಿಸುತ್ತಿದೆ. ಇದೀಗ ಕೊರೊನಾಗೆ ಹೆದರಿ ಪೊಲೀಸ್ ಕಾನ್ಸ್‌ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಕೆಎಸ್‌ಆರ್‌ಪಿ ಕಾನ್ಸ್‌ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 50 ವರ್ಷದ ಕೆಎಸ್‌ಆರ್‌ಪಿ ಹೆಡ್ ಕಾನ್ಸ್‌ಸ್ಟೇಬಲ್ ಎಂದು ತಿಳಿದುಬಂದಿದೆ. ಸೋಮವಾರ ಸಂಜೆಯಷ್ಟೇ ಕೊರೊನಾ ಪಾಸಿಟಿವ್ ಬಂದಿತ್ತು.

ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಬಸ್ಸಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ಕೆಎಸ್‌ಆರ್‌ಪಿ ಕಾನ್ಸ್‌ಸ್ಟೇಬಲ್ ಬಸ್ಸಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ ಕೋವಿಡ್-19 ಸಾವಿನ ಸರಣಿ ಮುಂದುವರಿದಿದ್ದು, ಸೋಮವಾರ 37 ವರ್ಷದ ಮಹಿಳೆ ಸೇರಿ ಐವರು ಕೊರೊನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವನ್ನಪ್ಪಿದವರ ಸಂಖ್ಯೆ 142ಕ್ಕೆ ಏರಿಕೆಯಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ