ಬೆಳಗಾವಿ : “ಗಾಂಧಿ ಭಾರತ” ಕಾರ್ಯಕ್ರಮ ಹಿನ್ನೆಲೆ ಬೆಳಗಾವಿಯ ರಾಮತೀರ್ಥ ನಗರದಲ್ಲಿ ನಿರ್ಮಿಸಿರುವ ಕರ್ನಾಟಕ ಸಿಂಹ ಗಂಗಾಧರ ರಾವ್ ದೇಶಪಾಂಡೆ ಅವರ ಸ್ಮಾರಕ ಭವನ ಮತ್ತು ಛಾಯಾಚಿತ್ರ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.

ಬೆಳಗಾವಿ ಕಾಂಗ್ರೆಸ್ ಅಧಿವೇಶನದ ರೂವಾರಿ ಆಗಿದ್ದ ಗಂಗಾಧರರಾವ್ ದೇಶಪಾಂಡೆ ಅವರ ಹೆಸರು ಅಜರಾಮರಗೊಳಿಸಲು 15 ಗುಂಟೆ ಜಾಗದಲ್ಲಿ 1.58 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಸ್ಮಾರಕ ಭವನ, ದೇಶಪಾಂಡೆ ಅವರ ಪುತ್ಥಳಿ, ಫೋಟೋ ಗ್ಯಾಲರಿ, ಉದ್ಯಾನವನವನ್ನು ಇಂದು ವಿಧ್ಯುಕ್ತವಾಗಿ ಲೋಕಾರ್ಪಣೆ ಆದವು. ದೇಶಪಾಂಡೆಯವರ ಪುತ್ಥಳಿಗೆ ನಮನ ಸಲ್ಲಿಸಿ, ಅವರ ಅಪರೂಪದ ಫೋಟೋಗಳನ್ನು ಸಿಎಂ ಸಿದ್ದರಾಮಯ್ಯ ಕಣ್ತುಂಬಿಕೊಂಡರು.
Laxmi News 24×7