Breaking News

ನಮ್ಮ ಅತ್ತೆ ಬೇಗ ಸಾಯಬೇಕು” ಎಂದು ಬರೆದು ಭಾಗ್ಯವಂತಿ ದೇವಿಗೆ ಹರಕೆ!

Spread the love

ಕಲಬುರಗಿ, ಡಿಸೆಂಬರ್​​ 28: ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ (Afzalpur) ತಾಲೂಕಿನ ಘತ್ತರಗಿ ಗ್ರಾಮದ ಭಾಗ್ಯವಂತಿ ದೇವಿಯ (Bhagyavanti Devi) ಹುಂಡಿ ಎಣಿಕೆ ಕಾರ್ಯ ನಡೆಯಿತು. ಹುಂಡಿ ಎಣಿಕೆ ಮಾಡುವ ವೇಳೆ ವಿಚಿತ್ರ ಹರಕೆಯ ನೋಟ್​ ಪತ್ತೆಯಾಗಿದೆ.

ಅತ್ತೆ ಸಾಯಬೇಕೆಂದು ಬರೆದಿರುವ 20 ರೂ. ಮುಖಬೆಲೆಯ ನೋಟ್ ಪತ್ತೆಯಾಗಿದೆ. “ತಾಯಿ, ನಮ್ಮ ಅತ್ತೆ ಬೇಗ ಸಾಯಬೇಕು” ಅಂತ 20 ರೂ. ಮುಖಬೆಲೆಯ ನೋಟ್ ಮೇಲೆ ಬರೆದು ಹುಂಡಿಯಲ್ಲಿ ಹಾಕಲಾಗಿದೆ.ಹುಂಡಿ ಎಣಿಕೆ ಕಾರ್ಯ ವೇಳೆ ನೋಟ್​ ಪತ್ತೆಯಾಗಿದೆ. ನೋಟ್​ನ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಅತ್ತೆ ಸಾಯಲೆಂದು ಸೊಸೆ ಈ ರೀತಿಯಾಗಿ ಬರೆದು ಹಾಕಿದ್ದಾಳೆ ಎಂದು ಊಹಿಸಲಾಗಿದೆ. ಹುಂಡಿಯಲ್ಲಿ 60 ಲಕ್ಷ ನಗದು, ಒಂದು ಕೆಜಿ ಬೆಳ್ಳಿ, 200 ಗ್ರಾಂ ಚಿನ್ನಾಭರಣ ಹುಂಡಿಯಲ್ಲಿ ಹಾಕಲಾಗಿತ್ತು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ