ದಾವಣಗೆರೆ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ವಿಚಾರವಾಗಿ ಸಂಸದ ಜಗದೀಶ್ ಶೆಟ್ಟರ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮೊನ್ನೆ ಬೆಳಗಾವಿಯಲ್ಲಿ ಹೆಬ್ಬಾಳ್ಕರ್ ಪಿಎ ಕಿರುಕುಳದಿಂದ ಎಸ್ಡಿಎ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ. ಆತ ಸಾಯುವ ಮುನ್ನ ಬರೆದಿದ್ದ ಡೆತ್ನೋಟ್ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪಿಎ ಹೆಸರು ಬರೆದಿಟ್ಟಿದ್ದ. ಆದರೂ ಅವರ ಪಿಎ ಬಂಧನ ಆಗದೆ ಬೇಲ್ ಪಡೆದು ಆಚೆ ಓಡಾಡುತ್ತಿದ್ದಾರೆ. ಈಗ ಕಲಬುರಗಿಯಲ್ಲಿ ಪ್ರಿಯಾಂಕ್ ಖರ್ಗೆ ಪಿಎ ಒತ್ತಡದಿಂದ ಗುತ್ತೆದಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಿಯಾಂಕ್ ಖರ್ಗೆ ಪಿಎ ಸೇರಿ ಅನೇಕ ಶಾಸಕರ ಒತ್ತಡ ಇದೆ ಅಂತ ಡೆತ್ನೋಟ್ ಬರೆದಿಟ್ಟರೂ ಎಫ್ಐಆರ್ ಮಾಡಿಲ್ಲ” ಎಂದು ಕಿಡಿಕಾರಿದರು.
Laxmi News 24×7