Breaking News

ವೀರಶೈವ ಧರ್ಮದ ಮೂಲ ಸಿದ್ಧಾಂತ ಅರಿತರೆ ಧರ್ಮದಲ್ಲಿ ಸವಾಲುಗಳನ್ನು ಎದುರಿಸಬಹುದು: ರಂಭಾಪುರಿ ಶ್ರೀ

Spread the love

ತುಮಕೂರು: ಜಗದ್ಗುರು ಶ್ರೀ ರೇಣುಕಾಚಾರ್ಯರು ನಡೆಸಿಕೊಂಡು ಬಂದ ವೀರಶೈವ ಪರಂಪರೆಯಲ್ಲಿ ವೀರಶೈವ ಧರ್ಮದ ಮೂಲ ಸಿದ್ಧಾಂತವನ್ನು ಬಹಳಷ್ಟು ಜನ ತಿಳಿದುಕೊಂಡಿಲ್ಲ. ತಿಳಿದುಕೊಳ್ಳುವ ಪ್ರಾಮಾಣಿಕ ಪ್ರಯತ್ನವೂ ಮಾಡುತ್ತಿಲ್ಲ. ಹೀಗಾಗಿ ಧರ್ಮದಲ್ಲಿ ಅನೇಕ ಸಮಸ್ಯೆ ಮತ್ತು ಸವಾಲುಗಳನ್ನು ಕಾಣುವಂತಾಗಿದೆ ಎಂದು ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.

ತುಮಕೂರು ನಗರದಲ್ಲಿ ನಾಲ್ಕು ದಿನಗಳ ಕಾಲ ನಡೆದ ಧನುರ್ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ ಧರ್ಮ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇರುವಂತಹ ಸತ್ಯವನ್ನು ಗ್ರಂಥಗಳಿಂದ ತಿಳಿದುಕೊಳ್ಳಲು ಸಾಧ್ಯವಿದೆ. ಆದರೆ ಕೆಲವರು ಅದನ್ನು ತಿಳಿದುಕೊಳ್ಳದಿರುವುದರಿಂದ ಕೆಲವೊಂದು ಅವಾಂತರಗಳು ಮತ್ತು ಆತಂಕಗಳಿಗೆ ಕಾರಣವಾಗಿದೆ ಎಂದು ತಿಳಿಸಿದರು.

ವೀರಶೈವ ಧರ್ಮದ ಇತಿಹಾಸ ಮತ್ತು ಬೆಳೆದು ಬಂದ ಪರಂಪರೆ ಅತ್ಯಂತ ಪ್ರಾಚೀನ ಎನ್ನುವುದರಲ್ಲಿ ಎರಡು ಮಾತಿಲ್ಲ. ಪರಮಾಚಾರ್ಯರು ಹಾಕಿದ ಧರ್ಮ ಸಿದ್ಧಾಂತದ ತಳಹದಿಯ ಮೇಲೆ 12ನೇ ಶತಮಾನದ ಬಸವಾದಿ ಶರಣರು ಅದರಂತೆ ನಡೆದು ನುಡಿದು ಸಮಾಜದ ಶಕ್ತಿಯನ್ನು ಮತ್ತಷ್ಟು ಸಂವರ್ಧನೆಗೊಳಿಸಿರುವಂತಹುದನ್ನು ಜನ ತಿಳಿದುಕೊಳ್ಳಬೇಕು. ಬಸವಾದಿ ಶಿವಶರಣರಿಗಿಂತ ಪೂರ್ವದಲ್ಲಿಯೇ ವೀರಶೈವ ಧರ್ಮ ಅಸ್ತಿತ್ವದಲ್ಲಿತ್ತು. ಜಗದ್ಗುರು ಪಂಚಾಚಾರ್ಯರ ಪರಂಪರೆ, ಪವಿತ್ರವಾದ ಗುರು ಪರಂಪರೆ, ಈ ವೀರಶೈವ ಧರ್ಮ ಪರಂಪರೆ ಮತ್ತು ತತ್ವ ಸಿದ್ದಾಂತಗಳನ್ನು ಪ್ರತಿಷ್ಠಾಪಿಸಿ ಜನರನ್ನು ಸನ್ಮಾರ್ಗದ ಕಡೆಗೆ ಕರೆತಂದಿತು ಎಂಬುದಕ್ಕೆ ಇತಿಹಾಸದಲ್ಲಿನ ಅನೇಕ ಸಂಗತಿಗಳು ಇವೆ ಎಂದರು.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ