Breaking News

ದಾಬಸ್ ಪೇಟೆ ಬಳಿ ಸರಣಿ ಅಪಘಾತ: ಓರ್ವ ಸಾವು, ಹಲವರಿಗೆ ಗಾಯ

Spread the love

ನೆಲಮಂಗಲ: ಇಲ್ಲಿಯ ದಾಬಸ್ ಪೇಟೆಯ ಕೈಗಾರಿಕಾ ಪ್ರದೇಶದಲ್ಲಿ ಇಂದು ಬೆಳಂಬೆಳಗ್ಗೆ ಸರಣಿ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಹಲವರು ಗಾಯಗೊಂಡಿದ್ದಾರೆ. ವೀರಣ್ಣ(55) ಮೃತ ದುರ್ದೈವಿ.

ದಾಬಸ್ ಪೇಟೆಯ ರಾಷ್ಟ್ರೀಯ ಹೆದ್ದಾರಿ 48ರ ಎಡೇಹಳ್ಳಿ ಬಳಿ ಇಂದು ಬೆಳಗ್ಗೆ ಈ ಸರಣಿ ಅಪಘಾತ ಸಂಭವಿದೆ. ಕೈಗಾರಿಕಾ ಪ್ರದೇಶದ ಹೆಬ್ಬಾಗಿಲು ಮುಂಭಾಗದಲ್ಲಿ ಪ್ಯಾಸೆಂಜರ್ ಆಟೋ, ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತವಾಗಿದ್ದು, ಘಟನೆಯಲ್ಲಿ ವೀರಣ್ಣ ಸ್ಥಳದಲ್ಲೇ ಮೃತಪಟ್ಟರೆ, ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿ ಸೇರಿದಂತೆ ಹಲವರು ಗಾಯಗೊಂಡಿದ್ದು, ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ರಸ್ತೆ ಪಕ್ಕ ನರಳಾಡುತ್ತಿದ್ದ ಪ್ರಯಾಣಿಕರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ