Breaking News

ರಿಷಿಕೇಶ್-ಹುಬ್ಬಳ್ಳಿ ನಡುವೆ ಸಾಪ್ತಾಹಿಕ ವಿಶೇಷ ಎಕ್ಸ್​ಪ್ರೆಸ್​ ರೈಲು

Spread the love

ಹುಬ್ಬಳ್ಳಿ: ರೈಲು ಸಂಖ್ಯೆ 07363 ಎಸ್ಎಸ್ಎಸ್ (ಶ್ರೀ ಸಿದ್ದಾರೂಢ ಸ್ವಾಮೀಜಿ) ಹುಬ್ಬಳ್ಳಿ – ಯೋಗ ನಗರಿ ರಿಷಿಕೇಶ್ ಸಾಪ್ತಾಹಿಕ ವಿಶೇಷ ಎಕ್ಸ್​ಪ್ರೆಸ್​ ಜನವರಿ 06ರಿಂದ ಮುಂದಿನ ಆದೇಶದ ವರೆಗೆ ಪ್ರತಿ ಸೋಮವಾರ 20:30 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು ಜನವರಿ 13 & 27, ಮತ್ತು ಫೆಬ್ರವರಿ 03,10 & 24, 2025 ರಂದು ಹೊರತುಪಡಿಸಿ ಬುಧವಾರ 23:30 ಗಂಟೆಗೆ ಯೋಗ ನಗರಿ ರಿಷಿಕೇಶ್ ತಲುಪಲಿದೆ.

ರೈಲು ಸಂಖ್ಯೆ 07364 ಯೋಗ ನಗರಿ ರಿಷಿಕೇಶ್-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್​ಪ್ರೆಸ್ ಜನವರಿ 09ರಿಂದ ಮುಂದಿನ ಆದೇಶದ ವರೆಗೆ ಪ್ರತಿ ಗುರುವಾರ 06:15 ಗಂಟೆಗೆ ಹೃಷಿಕೇಶದಿಂದ ಹೊರಟು ಜನವರಿ 16 & 30 ಮತ್ತು ಫೆಬ್ರವರಿ 06, 13 & 27, 2025 ಹೊರತುಪಡಿಸಿ ಶನಿವಾರ 06:30 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯನ್ನು ತಲುಪಲಿದೆ.

ಈ ವಿಶೇಷ ಎಕ್ಸ್​ಪ್ರೆಸ್​ ರೈಲು ಧಾರವಾಡ, ಲೋಂಡಾ, ಬೆಳಗಾವಿ, ಘಟಪ್ರಭಾ, ಮಿರಜ್, ಸಾಂಗ್ಲಿ, ಕರಡ್, ಸತಾರಾ, ಪುಣೆ, ದೌಂಡ್ ಕಾರ್ಡ್ ಲೈನ್, ಅಹ್ಮದ್ ನಗರ, ಕೋಪರ್ಗಾಂವ್, ಮನ್ಮಾಡ್ ಜಂಕ್ಷನ್, ಭೂಸಾವಲ್ ಜಂಕ್ಷನ್, ಹರ್ದಾ, ಇಟಾರ್ಸಿ ಜಂಕ್ಷನ್, ರಾಣಿ ಕಮಲಪತಿ, ಬೀನಾ ಜಂಕ್ಷನ್, ವಿರಂಗನಾ ಲಕ್ಷ್ಮಿಬಾಯಿ ಝಾನ್ಸಿ ರೈಲ್ವೆ ನಿಲ್ದಾಣ, ಗ್ವಾಲಿಯರ್ ಜಂಕ್ಷನ್, ಆಗ್ರಾ ಕಂಟೋನ್ಮೆಂಟ್, ಮಥುರಾ ಜಂಕ್ಷನ್, ಹಜರತ್ ನಿಜಾಮುದ್ದೀನ್ ಜಂಕ್ಷನ್, ಗಾಜಿಯಾಬಾದ್ ಜಂಕ್ಷನ್, ಮೀರತ್ ಸಿಟಿ ಜಂಕ್ಷನ್, ಮುಜಾಫರ್ ನಗರ, ದಿಯೋಬಂದ್, ತಾಪ್ರಿ ಜಂಕ್ಷನ್, ರೂರ್ಕಿ ಮತ್ತು ಹರಿದ್ವಾರ ನಿಲ್ದಾಣಗಲ್ಲಿ ನಿಲುಗಡೆ ಹೊಂದಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ