Breaking News

ಎಂಎಲ್​ಸಿ ಸಿ. ಟಿ ರವಿ ಅವರು ಪೊಲೀಸ್ ದೌರ್ಜನ್ಯ ಆರೋಪಿಸಿ ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ್ದಾರೆ.

Spread the love

ಬೆಂಗಳೂರು : ಕಳೆದ ಡಿಸೆಂಬರ್​ ತಿಂಗಳು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ತಮ್ಮ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ. ಟಿ ರವಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.‌

ಬೆಳಗಾವಿ ಸುವರ್ಣ ಸೌಧದಲ್ಲಿ ಹಾಗೂ ಹೊರಗೆ ನಡೆದ ಘಟನೆ ಬಗ್ಗೆ ದೂರು ನೀಡಿದ ಅವರು, ರಾಜ್ಯ ಪೊಲೀಸ್ ಹಾಗೂ ಸರ್ಕಾರ ನಡೆದುಕೊಂಡ ರೀತಿ ಬಗ್ಗೆ ವಿವರವಾಗಿ ದೂರು ನೀಡಿದ್ದಾರೆ. ದೂರಿನಲ್ಲಿ ಡಿಸಿಎಂ ಡಿ. ಕೆ ಶಿವಕುಮಾರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಬಸನಗೌಡ ಬಾದರ್ಲಿ, ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ವಿರುದ್ಧವೂ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಐಜಿ ಡಿಜಿಪಿ, ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, ಎಸ್​ಪಿ ಭೀಮಾಶಂಕರ್ ಗುಳೇದ್ ಸೇರಿ ಕಿರಿಯ ಪೊಲೀಸ್ ಅಧಿಕಾರಿಗಳು ದೌರ್ಜನ್ಯ ನಡೆಸಿರುವುದಾಗಿ ದೂರು ಸಲ್ಲಿಸಿದ್ದಾರೆ. ಸುಳ್ಳು ಎಫ್ಐಆರ್, ಪೊಲೀಸ್ ದೌರ್ಜನ್ಯ, ಅಪಹರಣ, ಕಾನೂನುಬಾಹಿರ ಬಂಧನ, ಎಫ್​ಐಆರ್ ದಾಖಲಿಸದೇ ಇರುವುದು, ಕಸ್ಟೋಡಿಯಲ್ ಟಾರ್ಚರ್, ವಶದಲ್ಲಿರುವಾಗ ರಕ್ತಸ್ರಾವ, ಎನ್​ಕೌಂಟರ್​ಗೆ ಯತ್ನ ಎಂದು ಆರೋಪಿಸಿ ದೂರು ನೀಡಿದ್ದಾರೆ.

ಸದನದಲ್ಲಿರುವಾಗ ನಡೆದ ಘಟನೆಗೆ ಸಭಾಪತಿ ಕ್ಲೀನ್ ಚಿಟ್ ಕೊಟ್ಟ ಬಳಿಕವೂ ಪೊಲೀಸರು ನನ್ನನ್ನು ಅಕ್ರಮವಾಗಿ ವಶಕ್ಕೆ ಪಡೆದು ದೌರ್ಜನ್ಯ ನಡೆಸಿದರು. ಸದನದಲ್ಲಿ ನಡೆದಿರುವ ಘಟನೆ ಬಗ್ಗೆ ಪೊಲೀಸರಿಗೆ, ಸಿಐಡಿಯವರಿಗೆ ಅಧಿಕಾರ ವ್ಯಾಪ್ತಿ ಇಲ್ಲದಿದ್ದರೂ ಡಿಸಿಎಂ ಡಿ‌. ಕೆ ಶಿವಕುಮಾರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸೂಚನೆ ಮೇರೆಗೆ ಅಧಿಕಾರ ದುರುಪಯೋಗ ಮಾಡಿದ್ದಾರೆ ಎಂದು ದೂರಿನಲ್ಲಿ ಸಿ ಟಿ ರವಿ ಆರೋಪಿಸಿದ್ದಾರೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ