Breaking News

ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್​ಗೆ ಅರ್ಜಿ

Spread the love

ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ಹತ್ಯೆ ಮಾಡಿದ ಆರೋಪದಲ್ಲಿ ನಟ ದರ್ಶನ್​ ಹಾಗೂ ಅವರ ಸಹಚರರು ಜೈಲು ಸೇರಿದ್ದರು. ಕೆಲವು ತಿಂಗಳ ಕಾಲ ಜೈಲು ವಾಸ ಅನುಭವಿಸಿದ್ದ ಅವರಿಗೆ ಇತ್ತೀಚೆಗೆ ಹೈಕೋರ್ಟ್​ ಜಾಮೀನು ನೀಡಿತ್ತು. ದರ್ಶನ್​ಗೆ ಬೆನ್ನು ನೋವು ಕಾಡುತ್ತಿದೆ. ಹೆಚ್ಚಿನ ಚಿಕಿತ್ಸೆ ಬಗ್ಗೆ ಅವರು ವೈದ್ಯರ ಜೊತೆ ಮಾತುಕತೆ ನಡೆಸಿದ್ದಾರೆ. ಈ ನಡುವೆ ದರ್ಶನ್ ಅವರಿಗೆ ಹೊಸ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ದರ್ಶನ್​ಗೆ ನೀಡಿರುವ ಬೇಲ್​ ರದ್ದು ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ.

ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಒಟ್ಟು 7 ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕೋರಿ ಪೊಲೀಸರು ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮುಂದಿನ ವಾರ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಇದರಿಂದಾಗಿ ದರ್ಶನ್​ ಮತ್ತು ಅವರ ಸಹಚರರಿಗೆ ಟೆನ್ಷನ್​ ಶುರುವಾಗಿದೆ.

ಪರಪ್ಪನ ಅಗ್ರಹಾರದಲ್ಲಿ ಜೈಲಿನ ನಿಯಮಗಳನ್ನು ಗಾಳಿಗೆ ತೂರಿದ್ದು ಬಹಿರಂಗ ಆದ ಬಳಿಕ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಕಳಿಸಲಾಗಿತ್ತು. ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇದ್ದಾಗ ದರ್ಶನ್​ಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿತ್ತು. ನಡೆದಾಡಲು ಕೂಡ ಅವರು ಕಷ್ಟಪಡುತ್ತಿದ್ದರು. ಕೂಡಲೇ ಶಸ್ತ್ರ ಚಿಕಿತ್ಸೆಯ ಅಗತ್ಯ ಇದೆ ಎಂದು ವೈದ್ಯರು ಸೂಚನೆ ನೀಡಿದ್ದರು. ಆ ವರದಿಯನ್ನು ಪರಿಗಣಿಸಿ ಮಧ್ಯಂತರ ಜಾಮೀನು ನೀಡಲಾಯಿತು. ಮಧ್ಯಂತರ ಜಾಮೀನು ಅವಧಿ ಮುಗಿಯುತ್ತಿದ್ದಂತೆಯೇ ದರ್ಶನ್​ಗೆ ರೆಗ್ಯುಲರ್​ ಬೇಲ್​ ಸಿಕ್ಕಿತ್ತು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ