ಬೆಂಗಳೂರು: ಪತ್ರಿಕಾ ಗೋಷ್ಠಿ ನಡೆಸುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ಮೂಡ್ ನಲ್ಲಿದ್ದರೆ ಜೋಕ್ ಗಳನ್ನು ಕಟ್ ಮಾಡುತ್ತ ಮಾತಾಡುತ್ತಾರೆ.
ಸತೀಶ್ ಜಾರಕಿಹೊಳಿ ಮನೆಗೆ ಅವರು ಹೊಸ ವರ್ಷದಂದು ಊಟಕ್ಕೆ ಹೋಗಿದ್ದು ಬಹಳ ಚರ್ಚೆಯಾಗುತ್ತಿದೆ. ಏನ್ಸಾರ್ ವಿಶೇಷ ಅಂತ ಕೇಳಿದರೆ, ಮಂತ್ರಿಗಳು ಶಾಸಕರು ಜೊತೆಯಾಗಿ ಊಟ ಮಾಡಿದರೆ ನಿಮಗೆ ಅದೊಂದು ಸುದ್ದಿಯೇ ಎಂದು ವಾಪಸ್ಸು ಪ್ರಶ್ನಿಸುತ್ತಾರೆ.
ಉಳಿದವರು ಔತಣದಲ್ಲಿ ಯಾಕಿರಲಿಲ್ಲ ಅಂದರೆ, ಯಾರನ್ನು ಅವರು ಕರೆದಿದ್ದರೋ, ಅವರು ಮಾತ್ರ ಇದ್ದರು, ಆಹ್ವಾನ ಇಲ್ಲದವರೂ ಹೋಗ್ತಾರೆಯೇ? ನಿಮಗೆ ಅಷ್ಟೊಂದು ಆಸಕ್ತಿ ಕುತೂಹಲವಿದ್ದರೆ ನೀವೂ ಬರಬೇಕಿತ್ತು ಅಂತ ಮಾಧ್ಯಮದವರಿಗೆ ಹೇಳುತ್ತಾರೆ.