Breaking News

ಸಂಕ್ರಾಂತಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ಎಕ್ಸ್​ಪ್ರೆಸ್ ರೈಲು

Spread the love

ಹುಬ್ಬಳ್ಳಿ : ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ ರೈಲ್ವೆ ಕೆಎಸ್ಆರ್ ಬೆಂಗಳೂರು, ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್, ಎಸ್ಎಂವಿಟಿ ಬೆಂಗಳೂರು- ಟುಟಿಕೋರಿನ್- ಮೈಸೂರು ನಿಲ್ದಾಣಗಳ ನಡುವೆ ವಿಶೇಷ ಎಕ್ಸ್​ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ.

ರೈಲು ಸಂಖ್ಯೆ 07319/07320 ಕೆಎಸ್ಆರ್ ಬೆಂಗಳೂರು- ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ – ಕೆಎಸ್ಆರ್ ಬೆಂಗಳೂರು ವಿಶೇಷ ಎಕ್ಸ್​ಪ್ರೆಸ್ ರೈಲು (1 ಟ್ರಿಪ್)

ರೈಲು ಸಂಖ್ಯೆ 07319 ಕೆಎಸ್ಆರ್ ಬೆಂಗಳೂರು – ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 10, 2025 ರಂದು ಬೆಳಿಗ್ಗೆ 08:05 ಕ್ಕೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ ಮಧ್ಯಾಹ್ನ 02:40 ಕ್ಕೆ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ತಲುಪಲಿದೆ.

ಪುನಃ ಇದೆ ರೈಲು (07320) ಜನವರಿ 10, 2025 ರಂದು ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಮಧ್ಯಾಹ್ನ 03:40 ಕ್ಕೆ ಹೊರಟು, ಅದೇ ದಿನ ರಾತ್ರಿ 10:50 ಕ್ಕೆ ಕೆಎಸ್ಆರ್ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎರಡೂ ಮಾರ್ಗಗಳಲ್ಲಿ ಯಶವಂತಪುರ, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಅಂಬೂರು, ಗುಡಿಯಾಟ್ಟಂ, ಕಟಪಾಡಿ, ಶೋಲಿಂಗೂರ್, ಅರಕ್ಕೋಣಂ, ತಿರುವಳ್ಳೂರು ಮತ್ತು ಪೆರಂಬೂರಿನಲ್ಲಿ ನಿಲ್ಲಲಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ