Breaking News

ರೈತರ ನಿದ್ದೆಗೆಡಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

Spread the love

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

 

ಕರಂಬಳ, ಚಾಪಗಾಂವ್ ಸೇರಿ ಹಲವೆಡೆ ಕಾಡಾನೆ ಹಾವಳಿಗೆ ರೈತರು ನಲುಗಿ ಹೋಗಿದ್ದರು. ಕಬ್ಬು ಮತ್ತಿತರ ಬೆಳೆಗಳನ್ನು ಆನೆ ಹಾಳು ಮಾಡುತ್ತಿದ್ದುದರಿಂದ ಕಂಗಾಲಾಗಿದ್ದರು.

 

ಕಾಡಾನೆ ಹಾವಳಿಗೆ ಕಂಗೆಟ್ಟಿದ್ದ ಖಾನಾಪುರದ ರೈತರಿಗೆ ಇದೀಗ ಮುಕ್ತಿ ಸಿಕ್ಕಿದೆ ಎನ್ನಬಹುದು. ಶಿವಮೊಗ್ಗದ ಸಕ್ರೆಬೈಲು ಬಿಡಾರದಿಂದ ಬಂದಿದ್ದ ನುರಿತ ಆನೆಗಳ ಸಹಾಯದಿಂದ ಕಾಡಾನೆಯನ್ನು ಸೆರೆ ಹಿಡಿಯಲಾಯಿತು.

ಖಾನಾಪುರ ಎಸಿಎಫ್ ಸುನೀತಾ ನಿಂಬರಗಿ ನೇತೃತ್ವದಲ್ಲಿ ನಿನ್ನೆ (ಗುರುವಾರ) ಬೆಳಿಗ್ಗೆಯಿಂದ ಸಂಜೆಯವರೆಗೂ ಸೆರೆ ಕಾರ್ಯಾಚರಣೆ ನಡೆಯಿತು.

 

ಕಾರ್ಯಾಚರಣೆಯಲ್ಲಿ ಖಾನಾಪುರ ಆರ್​ಎಫ್ಓ ಶ್ರೀಕಾಂತ್ ಪಾಟೀಲ, ನಂದಗಡ ವಲಯ ಅರಣ್ಯ ಅಧಿಕಾರಿ ಮಾಧುರಿ ದಳವಾಯಿ ಸೇರಿದಂತೆ ಹಲವು ಸಿಬ್ಬಂದಿ ಭಾಗಿಯಾಗಿದ್ದರು.


Spread the love

About Laxminews 24x7

Check Also

ಅರಭಾವಿ ಆಂಜನೇಯ ದೇವರ ಕಾರ್ತೀಕೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಮೂಡಲಗಿ- ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಅರಭಾವಿ ಆಂಜನೇಯ ದೇವಸ್ಥಾನಕ್ಕೆ ತೆರಳಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ