Breaking News

ಗವಿಗಂಗಾಧರೇಶ್ವರ ದೇಗುಲದ ಶಿವಲಿಂಗಕ್ಕೆ ಸೂರ್ಯನ ಪೂಜೆ ನಡೆದಿದೆ: ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್

Spread the love

ಬೆಂಗಳೂರು: ಗವಿಪುರದ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಸೂರ್ಯನಿಂದ ಶಿವಲಿಂಗ ಸ್ಪರ್ಶದ ಕೌತುಕ ಕಣ್ತುಂಬಿಕೊಳ್ಳಲು ಬಂದ ಭಕ್ತರಿಗೆ ನಿರಾಸೆಯಾಗಿದೆ. ಮೋಡ ಕವಿದಿದ್ದರಿಂದ ಇತಿಹಾಸದಲ್ಲೇ 2ನೇ ಬಾರಿಗೆ ಸೂರ್ಯ ರಶ್ಮಿ ಶಿವಲಿಂಗದ ಸ್ಪರ್ಶ ಮಾಡಿಲ್ಲ. ಪ್ರತಿ ಮಕರ ಸಂಕ್ರಾಂತಿ ದಿನ ಗವಿಗಂಗಾಧರೇಶ್ವರ ದೇಗುಲದ ಶಿವಲಿಂಗದ ಮೇಲೆ ಸೂರ್ಯ ರಶ್ಮಿ‌ಯ ಸ್ಪರ್ಶವಾಗುತ್ತದೆ. ಆದರೆ, ಈ ಬಾರಿ ಗವಿಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶಿಸಿಲ್ಲ.

ಗವಿಗಂಗಾಧರೇಶ್ವರ ದೇಗುಲದ ಶಿವಲಿಂಗ, ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್

ಗವಿಗಾಂಗಾಧರೇಶ್ವರ ದೇವಾಲಯದ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್ ಪ್ರತಿಕ್ರಿಯಿಸಿ, “ಸಂಜೆ 5:20 ರಿಂದ 5:23ರ ಸುಮಾರಿಗೆ ದೇಗುಲ ಬಲಭಾಗದ ಕಮಾನಿನಿಂದ ಕಿಟಕಿಯ ಮೂಲಕ ಪ್ರವೇಶಿಸಬೇಕಿದ್ದ ಸೂರ್ಯ ರಶ್ಮಿ ಮೋಡ ಕವಿದಿದ್ದರಿಂದ ಗೋಚರವಾಗಿಲ್ಲ. ಇದರಿಂದ ಕಾತರದಿಂದ ಕಾಯುತ್ತಿದ್ದ ಭಕ್ತರಿಗೆ ನಿರಾಸೆಯುಂಟಾಗಿದೆ. ಶಿವಲಿಂಗಕ್ಕೆ ಸೂರ್ಯನ ಪೂಜೆ ನಡೆದಿದೆ. ಈಶ್ವರನ ಅನುಗ್ರಹ ನಾಳೆಯಿಂದ ಎಲ್ಲರಿಗೂ ಸಿಗುತ್ತದೆ. ಸೂರ್ಯರಶ್ಮಿಯು ಖಂಡಿತವಾಗಿಯೂ ಶಿವಲಿಂಗವನ್ನ ಸ್ಪರ್ಶಿಸಿದೆ. ಆದರೆ, ಎಷ್ಟು ನಿಮಿಷಗಳ ಕಾಲ ಸೂರ್ಯ ರಶ್ಮಿಯ ಸ್ಪರ್ಶವಾಗಿದೆ ಎಂದು ತಿಳಿದಿಲ್ಲ. ಪ್ರಸಕ್ತ ವರ್ಷದಲ್ಲಿ ಯಾವುದೇ ಕೆಡುಕುಗಳು ಉಂಟಾಗುವುದಿಲ್ಲ” ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ