ಹುಬ್ಬಳ್ಳಿ: ಅವಳಿ- ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ 45 ಮಂದಿ ರೌಡಿಶೀಟರ್ಗಳಿಗೆ ಗಡಿಪಾರು ಮಾಡಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರೌಡಿಶೀಟರ್ಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಕೊಲೆ, ಸುಲಿಗೆ, ಮಾದಕ ವಸ್ತು ಮಾರಾಟ ಹಾಗೂ ಸೇವನೆ, ಮಟ್ಕಾ, ಭೂ ಮಾಫಿಯಾ ಸೇರಿದಂತೆ ಇನ್ನಿತರ ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿಶೀಟರ್ಗಳಿಂದ ಸಮಾಜದಲ್ಲಿ ಅಶಾಂತಿ ಉಂಟಾಗುವ ಸಾಧ್ಯತೆಗಳಿದೆ. ಈ ನಿಟ್ಟಿನಲ್ಲಿ ಶಾಂತಿ ನೆಲೆಸಲು ಕ್ರಮ ಜರುಗಿಸಲಾಗಿದೆ. ಆರೋಪಿಗಳನ್ನು ಬೀದರ್, ಯಾದಗಿರಿ, ದಕ್ಷಿಣ ಕನ್ನಡ, ಚಾಮರಾಜನಗರಗಳಿಗೆ ಸ್ಥಳಾಂತರಿಸಲಾಗಿದೆ. ಅಲ್ಲದೇ ಇವರ ಚಟುವಟಿಕೆಗಳ ಮೇಲೆ ನಿಕಟ ನಿಗಾ ಇರಿಸಲಾಗಿದೆ ಎಂದರು.
Laxmi News 24×7