Breaking News

ಕುರುಕ್ಷೇತ್ರ ನಾಟಕದ ಭೀಮನ ಪಾತ್ರದ ಡೈಲಾಗ್ ಹೇಳಿದ ಮಿಂಚಿದ ಶಾಸಕ ಶಿವಲಿಂಗೇಗೌಡ

Spread the love

ಹಾಸನ, ಜನವರಿ 16: ಶಾಸಕ ಶಿವಲಿಂಗೇಗೌಡ ಕುರುಕ್ಷೇತ್ರ ನಾಟಕದ ಭೀಮನ ಪಾತ್ರದ ಡೈಲಾಗ್ ಹೇಳಿ ಗಮನ ಸೆಳೆದರು. ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗುತ್ತಿನಕೆರೆ ಗ್ರಾಮದಲ್ಲಿ ಬುಧವಾರ ಗ್ರಾಮಸ್ಥರು ಕುರುಕ್ಷೇತ್ರ ನಾಟಕ ಅಭಿನಯಿಸಿದ್ದರು. ನಾಟಕ ಉದ್ಘಾಟನೆಗೆ ತೆರಳಿದ್ದ ಶಿವಲಿಂಗೇಗೌಡ, ಭೀಮನ ಪಾತ್ರ ಅಭಿನಯ ಮಾಡಿ ತೋರಿಸಿದರು.

ಈ ಹಿಂದೆ ಶಿವಲಿಂಗೇಗೌಡ ಪೌರಾಣಿಕ ನಾಟಕದಲ್ಲಿ ಭೀಮನ ಪಾತ್ರ ನಟಿಸುತ್ತಿದ್ದರು. ಹೀಗಾಗಿ ಉದ್ಘಾಟನಾ ಸಮಾರಂಭದ ವೇಳೆ, ಭೀಮನ ಡೈಲಾಗ್ ಹೇಳುವಂತೆ ಜನ ಒತ್ತಾಯಿಸಿದ್ದರು. ಇದೇ ವೇಳೆ ಅವರು, ಕೈಯಲ್ಲಿ ಗದೆ ಹಿಡಿದು ದ್ರೌಪದಿ ಜೊತೆಗಿನ ಸಂಬಾಷಣೆ ಸನ್ನಿವೇಶದ ಡೈಲಾಗ್ ಹೇಳಿದ್ದಾರೆ. ಡೈಲಾಗ್ ಜೊತೆ ಹಾಡು ಹಾಡಿ ಜನರನ್ನು ರಂಜಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ