ಬೀದರ್, ಜನವರಿ 16: ಬೀದರ್ನ ಹೃದಯ ಭಾಗ ಶಿವಾಜಿ ಚೌಕ್ನಲ್ಲಿ ಗುರುವಾರ ಎಟಿಎಂಗೆ ಹಣ ತುಂಬಿಸುವ ವೇಳೆ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಎಟಿಎಂಗೆ ಹಣ ತುಂಬುವ ವಾಹನದ ಹಿಂಭಾಗ ವ್ಯಕ್ತಿಯೊಬ್ಬನ ಶವ ಬಿದ್ದಿದ್ದರೆ, ಕ್ಷಣಮಾತ್ರದಲ್ಲೇ ಸಿನಿಮೀಯ ರೀತಿಯಲ್ಲಿ ಇಬ್ಬರು ದುರ್ಷರ್ಮಿಗಳು ಹಣ ಎಗರಿಸಿ ಪರಾರಿಯಾಗಿದ್ದಾರೆ.

ಬೀದರ್ ಶಿವಾಜಿ ಚೌಕ್ನಲ್ಲಿ ನಡೆದಿದ್ದೇನು?
ಅದು ಬೀದರ್ನ ಹೃದಯ ಭಾಗ ಶಿವಾಜಿ ಚೌಕ್. ಜನ ಎಂದಿನಂತೆ ತಮ್ಮ ಕೆಲಸದಲ್ಲಿ ನಿರತರಾಗಿದ್ದರು. ಎಟಿಎಂಗಳಿಗೆ ಹಣ ತುಂಬುವ ವಾಹನವೊಂದು ಅಲ್ಲಿಗೆ ಬಂದಿದೆ. ಹಾಡಹಗಲೇ, ನೋಡ ನೋಡುತ್ತಿದ್ದಂತೆಯೇ ಏಕಾಏಕಿ ದುರ್ಷರ್ಮಿಗಳು ವಾಹನದ ಮೇಲೆ ಗುಂಡಿ ದಾಳಿ ನಡೆಸಿದ್ದಾರೆ. ವಾಹನದಲ್ಲಿದ್ದ ವ್ಯಕ್ತಿ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.
ದುಷ್ಕರ್ಮಿಗಳ ದಾಳಿಗೆ ಬಲಿಯಾದ ವ್ಯಕ್ತಿಯನ್ನು ಗಿರಿ ವೆಂಕಟೇಶ್ (ಎಟಿಎಂಗಳಿಗೆ ಹಣ ಹಾಕುವ ಸಿಎಂಎಸ್ ಏಜೆನ್ಸಿಯ ಸಿಬ್ಬಂದಿ) ಎಂದು ಗುರುತಿಸಲಾಗಿದೆ. ಎಂದಿನಂತೆ ಇವತ್ತು ಕೂಡ ಎಟಿಎಂಗಳಿಗೆ ಹಣ ಹಾಕಲು ತೆರಳುತ್ತಿದ್ದಾಗ ಬೈಕ್ನಲ್ಲಿ ಬಂದ ದುರ್ಷರ್ಮಿಗಳು ಐದು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಗಿರಿ ವೆಂಕಟೇಶ್ಗೆ ಗುಂಡು ತಗುಲಿದೆ. ಸ್ಥಳದಲ್ಲೇ ಗಿರಿ ಮೃತಪಟ್ಟಿದ್ದಾರೆ.
Laxmi News 24×7