Breaking News

ಮುಂದಿನ ದಿನಗಳಲ್ಲಿ‌ ಬೆಳಗಾವಿಗೆ ವಿಶೇಷ ಕೊಡುಗೆ ಘೋಷಣೆ: ಡಿಸಿಎಂ

Spread the love

ಬೆಳಗಾವಿ: ”ಮಹಾತ್ಮ ಗಾಂಧೀಜಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸುವ ಮೂಲಕ ಬೆಳಗಾವಿಯನ್ನು ಪರಿಚಯಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿತ್ತು. ಹಾಗಾಗಿ, ದೇಶದ ಜನ ಈಗ ಬೆಳಗಾವಿ ಎಲ್ಲಿದೆ ಎಂದು ಕೇಳುತ್ತಿದ್ದಾರೆ. ಬೆಳಗಾವಿಯನ್ನು ಇಡೀ ದೇಶಕ್ಕೆ ಪರಿಚಯಿಸುವ ಕೆಲಸ ಮಾಡುತ್ತಿದ್ದೇವೆ. ಆ ಪರಂಪರೆ ಉಳಿಸಿ, ಮುಂದುವರಿಸುವ ಕೆಲಸವನ್ನು ನಾವು ಮಾಡುತ್ತೇವೆ. ಆದರೆ, ಈಗ ಬೆಳಗಾವಿಗೆ ಯಾವುದೇ ವಿಶೇಷ ಯೋಜನೆ ಘೋಷಿಸುವುದಿಲ್ಲ. ಮುಂದಿನ ದಿನಗಳಲ್ಲಿ ಖಂಡಿತ ಘೋಷಿಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದರು.

ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಸ್ಮರಣೀಯಗೊಳಿಸುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಸಮಾವೇಶ ನಡೆಯಲಿರುವ ಬೆಳಗಾವಿ ನಗರದ ಸಿಪಿಇಡ್ ಮೈದಾನದಲ್ಲಿ ಉತ್ತರಿಸಿದರು.

”ಸರ್ಕಾರ ಮತ್ತು ಪಕ್ಷದಿಂದ ಹೆಚ್.ಕೆ.ಪಾಟೀಲ್​, ವೀರಪ್ಪ ಮೊಯ್ಲಿ, ಬಿ‌‌.ಎಲ್.ಶಂಕರ, ಕೆ.ಎಚ್‌.ಮುನಿಯಪ್ಪ, ರೆಹಮಾನ್ ಖಾನ್ ಸೇರಿ ಇನ್ನಿತರ ಮುಖಂಡರನ್ನು ಒಳಗೊಂಡ ಸಮಿತಿಯನ್ನು ರಚಿಸಿದ್ದೇವೆ. ಆ ಸಮಿತಿಯವರು ಸರ್ಕಾರಕ್ಕೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ‌. ಶಾಲಾ ಕಾಲೇಜುಗಳಲ್ಲಿ ಇದೆಲ್ಲವನ್ನು ನೆನಪು ಮಾಡಿಕೊಳ್ಳಲು, ಮತ್ತು ಬೇರೆ ಕಡೆ ಕಾರ್ಯಕ್ರಮ ಮಾಡಲು ತಿಳಿಸಿದ್ದಾರೆ‌. ಇದಕ್ಕೆ ಮುಖ್ಯಮಂತ್ರಿ ಬಜೆಟ್​ನಲ್ಲಿ ಹಣ ಇಟ್ಟಿದ್ದಾರೆ. ಇಡೀ ವರ್ಷ ಕಾರ್ಯಕ್ರಮ ನಡೆಯಲಿವೆ. ಮುಂದಿನ ದಿನಗಳಲ್ಲಿ ವಿಶೇಷ ಕಾರ್ಯಕ್ರಮ ಘೋಷಿಸುತ್ತೇವೆ” ಎಂದರು.

DCM D K Shivakumar Pressmeet

”ಬೆಳಗಾವಿಯಲ್ಲಿ ಕಾಂಗ್ರೆಸ್ ಮತ್ತು ದೇಶದ ಇತಿಹಾಸದಲ್ಲಿ ಐತಿಹಾಸಿಕ ಸಮಾವೇಶಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಸಮಾವೇಶಕ್ಕೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಎಂದು ಎಐಸಿಸಿ ಅವರು ಹೆಸರು ಇಟ್ಟಿದ್ದಾರೆ. ಈ ದೇಶದ ಸ್ವಾತಂತ್ರ್ಯ, ಸಂವಿಧಾನ, ಐಕ್ಯತೆ ಕಾಪಾಡಲು ನಾವು ಗಾಂಧೀಜಿ ತತ್ವ, ಅಂಬೇಡ್ಕರ್ ಅವರ ನೀತಿ ಮತ್ತು ನಮ್ಮ ಸಂವಿಧಾನದ ರಕ್ಷಣೆ ಮಾಡಲು, ಮುಂದಿನ ಪೀಳಿಗೆಗೆ ಮಾರ್ಗದರ್ಶನ ಮಾಡಲು ಐತಿಹಾಸಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ” ಎಂದು ತಿಳಿಸಿದರು.

”ಇದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಮಾತ್ರ ಅಲ್ಲ. ದೇಶದ ಸಂವಿಧಾನ ಉಳಿಸುವ, ಗಾಂಧೀಜಿ ಆದರ್ಶ ಮತ್ತು ಅಂಬೇಡ್ಕರ್ ಅವರ ತತ್ವದಾರ್ಶಗಳನ್ನು ರಕ್ಷಣೆ ಮಾಡಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಬಿಜೆಪಿ ಸೇರಿ ಯಾವುದೇ ಪಕ್ಷದ ಸದಸ್ಯತ್ವ ಹೊಂದಿರುವವರನ್ನು ಬಿಟ್ಟು ಕಾಂಗ್ರೆಸ್ ಪಕ್ಷ, ಅಂಬೇಡ್ಕರ್ ಮತ್ತು ಸಂವಿಧಾನದ ತತ್ವ, ಸಿದ್ಧಾಂತಗಳಲ್ಲಿ ನಂಬಿಕೆ ಮತ್ತು ಗೌರವ ಹೊಂದಿರುವ ಪ್ರತಿಯೊಬ್ಬರು ಪಕ್ಷಬೇಧ ಮರೆತು ಸಮಾವೇಶದಲ್ಲಿ ಭಾಗಿಯಾಗಬೇಕು. ಇತಿಹಾಸದ ಪುಟದಲ್ಲಿ ತಾವು ಸಾಕ್ಷಿಯಾಗಬೇಕು” ಎಂದು ಕೇಳಿಕೊಂಡರು.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ