Breaking News

ಅಪ್ಪನ ಸಾವಿನ ಸದ್ದಿ ಮುಚ್ಚಿಟ್ಟು ಮಗಳ ಮದ್ವೆ

Spread the love

ಚಿಕ್ಕಮಗಳೂರು, (ಜನವರಿ 20): ಆಸ್ಪತ್ರೆಯ ಚಿತಾಗಾರದಲ್ಲಿ ಅಪ್ಪನ ಶವ. ಮದುವೆ ಮಂಟಪದಲ್ಲಿ ಮಗಳ ವಿವಾಹೋತ್ಸವ ನಡೆದಿದೆ. ಹೌದು…ಮದುವೆ ನಿಲ್ಲಬಾರದು ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸಾವಿನ ಸುದ್ದಿ ಮುಚ್ಚಿಟ್ಟಿದ್ದು, ಅತ್ತ ಅಪ್ಪ ಸಾವನ್ನಪ್ಪಿದ ವಿಷಯ ತಿಳಿಯದೆ ಈ ಮಗಳು ಖುಷಿ ಖಷಿಯಿಂದಲೇ ಸಪ್ತಪದಿ ತುಳಿದಿದ್ದಾಳೆ. ಈ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದ್ದು, ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದಿದೆ. ಚಂದ್ರು ಎನ್ನುವರೇ ಮಗಳ ಮದುವೆಯನ್ನು ಕಣ್ತುಂಬಿಕೊಳ್ಳದೇ ರಸ್ತೆ ಅಪಘಾತದಲ್ಲಿ ಕಣ್ಮುಚ್ಚಿದ್ದಾರೆ.

ಅಪ್ಪನ ಸಾವಿನ ಸದ್ದಿ ಮುಚ್ಚಿಟ್ಟು ಮಗಳ ಮದ್ವೆ: ಚಿಕ್ಕಮಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ಇಂದು (ಜನವರಿ 20) ಚಂದ್ರು ಮಗಳು ದೀಕ್ಷಿತಾಳ ಮದುವೆ ನಿಶ್ಚಯವಾಗಿತ್ತು. ಚಂದ್ರು ತನ್ನ ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡೋ ತಯಾರಿಯಲ್ಲಿದ್ದರು. ಆದ್ರೆ, ನಿನ್ನೆ (ಜನವರಿ 19) ಬೆಳಗ್ಗೆ ತರೀಕೆರೆ ತಾಲೂಕಿನ ಹುಲಿತಿಮ್ಮಾಪುರಕ್ಕೆ ಲಗ್ನಪತ್ರಿಕೆ ಕೊಡಲು ಹೋಗಿದ್ದ ಚಂದ್ರು ವಾಪಸ್ ಬರುವಾಗ ಬೈಕ್​ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಇತ್ತ ಅಪ್ಪ ಆಸ್ಪತ್ರೆಯಲ್ಲಿ ಇದ್ದಾರೆ ಎಂದು ಹೇಳಿದ ಸಂಬಂಧಿಕರು ಆರತಕ್ಷತೆ-ಮದುವೆ ಕಾರ್ಯವನ್ನು ಮುಗಿಸಿದ್ದಾರೆ. ಆದರೆ ಚಂದ್ರು ಸಾವನ್ನಪ್ಪಿದ್ದ ವಿಷಯ ಪತ್ನಿಗೂ ತಿಳಿದಿರಲಿಲ್ಲ. ಮಗಳಿಗೂ ಗೊತ್ತಿರಲಿಲ್ಲ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ