Breaking News

ಮೈಕ್ರೋ ಫೈನಾನ್ಸ್​ ಕಿರುಕುಳಕ್ಕೆ ಪತಿ ಆತ್ಮಹತ್ಯೆ: ಗೃಹ ಸಚಿವರಿಗೆ ಮಾಂಗಲ್ಯ ಸರ ಕಳುಹಿಸಿದ ಪತ್ನಿ

Spread the love

ರಾಯಚೂರು, ಜನವರಿ 23: ಮೈಕ್ರೋ ಫೈನಾನ್ಸ್ (Micro finance) ಕಂಪನಿಗಳು ನೀಡುತ್ತಿರುವ ಕಿರುಕುಳಕ್ಕೆ ಸಾಲ ಪಡೆದ ಕಡುಬಡವರು ದಿಕ್ಕೆಟ್ಟು ಓಡುವಂತೆ ಮಾಡಿದೆ. ಸದ್ಯ ಗಡಿ ಜಿಲ್ಲೆಯಲ್ಲಿ ಇವರ ಕಿರುಕುರಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಇದೀಗ ಆ ಮೃತನ ಪತ್ನಿ ತನ್ನ ಮಾಂಗಲ್ಯ ಸರವನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್​ ಅವರಿಗೆ​ ಕಳುಹಿಸಿ ಹೋರಾಟಕ್ಕೆ ಮುಂದಾಗಿದ್ದಾರೆ.

ಹೋರಾಟಕ್ಕಿಳಿದ ಮೃತನ ಪತ್ನಿ

ಮೈಕ್ರೋ ಫೈನಾನ್ಸ್​ಗಳ ಕಿರುಕುಳ ಹೆಚ್ಚಾಗುತ್ತಲೇ ಇದೆ. ಈ ಕಾರಣದಿಂದ ಇದೇ ಜನವರಿ 17 ರಂದು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಶರಣಬಸವ ಎನ್ನುವ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ತಡವಾಗಿ ಬೆಳಕಿಗೆ ಬಂದಿತ್ತು. ಶರಣಬಸವನಿಗೆ ಸಾಲ ಕೊಟ್ಟಿರುವ ಮೈಕ್ರೋ ಫೈನಾನ್ಸ್ ಸಿಬ್ಬಂದಿ ನಿತ್ಯ ಟಾರ್ಚರ್ ಕೊಡುತ್ತಿದ್ದರಂತೆ. ಈ ಬಗ್ಗೆ ಗೊತ್ತಾದ ಬಳಿಕ ಇದೇ ಗ್ರಾಮದ ಹಲವರು ಕೂಡ ಫೈನಾನ್ಸ್ ಕಂಪನಿ ಕಣ್ತಪ್ಪಿಸಿ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.ಇದರ ಬೆನ್ನಲ್ಲೇ ಈಗ ಮೃತ ಶರಣಬಸವನ ಕುಟುಂಬ ನ್ಯಾಯಕ್ಕಾಗಿ ಹೋರಾಟಕ್ಕೆ ಸಜ್ಜಾಗಿದೆ. ಶರಣಬಸವ ಡ್ರೈವಿಂಗ್ ಜೊತೆ ಕೂಲಿ ಕೆಲಸವನ್ನೂ ಮಾಡುತ್ತಿದ್ದರು. ಆದರೆ ಕೆಲ ಖಾಸಗಿ ಕಂಪನಿಗಳಿಂದ ಸುಮಾರು 6-8 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಇತ್ತೀಚೆಗೆ ಕೆಲ ಕಂತುಗಳು ಬಾಕಿ ಇದ್ದ ಹಿನ್ನೆಲೆ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗುತ್ತಂತೆ. ಇದೇ ಕಾರಣಕ್ಕೆ ಶರಣಬಸವ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಾದ ಬಳಿಕ ಈಗ ಮೃತನ ಕುಟುಂಬ ಇಂದು ಸ್ಥಳೀಯ ಹೋರಾಟಗಾರರ ಜೊತೆಗೆ ಒಗ್ಗೂಡಿ ಹೋರಾಟಕ್ಕಿಳಿದಿದ್ದಾರೆ. ಘಟನೆ ನೆನೆದು ಮೃತನ ಪತ್ನಿ ಕಣ್ಣೀರಿಟ್ಟಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ