ಬೆಂಗಳೂರು, ಜನವರಿ 27: ಬಿಎಂಟಿಸಿಯ ನೌಕರರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡರೆ ಅವರ ಕುಟುಂಬಕ್ಕೆ ಬರೋಬ್ಬರಿ 1.50 ಕೋಟಿ ರುಪಾಯಿ ಪರಿಹಾರ ನೀಡುವ ಯೋಜನೆ ಕೊನೆಗೂ ಜಾರಿಗೆ ಬಂದಿದೆ. ಕೆಎಸ್ಆರ್ಟಿಸಿ ನೌಕರರು ಅಪಘಾತದಲ್ಲಿ ಮೃತಪಟ್ಟರೆ ಅವರ ಕುಟುಂಬದವರಿಗೆ 1 ಕೋಟಿ ರುಪಾಯಿ ಪರಿಹಾರ ನೀಡಲಾಗುತ್ತಿತ್ತು. ಆದರೆ ಬಿಎಂಟಿಸಿಯ ನೌಕರರು ಆಕ್ಸಿಡೆಂಟ್ನಲ್ಲಿ ಪ್ರಾಣ ಕಳೆದುಕೊಂಡರೆ 50 ಲಕ್ಷ ರುಪಾಯಿ ಮಾತ್ರ ಪರಿಹಾರ ನೀಡಲಾಗುತ್ತಿತ್ತು.
ಈ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ದೇಶದಲ್ಲಿ ಯಾವುದೇ ಸರಕಾರಿ ನೌಕರರಿಗೂ ಈ ಸೌಲಭ್ಯವಿಲ್ಲ, ಸೇನೆಯಲ್ಲಿ ಸೇವೆ ಸಲ್ಲಿಸುವ ಯೋಧರು ಪ್ರಾಣ ಕಳೆದುಕೊಂಡರು 60 ಲಕ್ಷ ರುಪಾಯಿ ನೀಡಲಾಗುತ್ತದೆ ಆದರೆ, ಬಿಎಂಟಿಸಿ ನೌಕರರು ಅಪಘಾತದಲ್ಲಿ ಮೃತಪಟ್ಟರೆ ಇನ್ನು ಒಂದೂವರೆ ಕೋಟಿ ರುಪಾಯಿ ನೀಡಲಾಗುತ್ತದೆ ಎಂದರು.
Laxmi News 24×7