Breaking News

ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಒಂದು ಕೋಟಿ ರೂಪಾಯಿ ಪತ್ತೆ!

Spread the love

ಕಾರವಾರ (ಉತ್ತರ ಕನ್ನಡ): ನಿರ್ಜನ ಪ್ರದೇಶವೊಂದರಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1 ಕೋಟಿ ರೂಪಾಯಿ ಪತ್ತೆಯಾದ ಘಟನೆ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ರಾಮನಗುಳಿ ಬಳಿ ನಡೆದಿದೆ.

ಸೋಮವಾರ ಸಂಜೆಯಿಂದ ನಿರ್ಜನ ಪ್ರದೇಶದಲ್ಲಿ ಅಪರಿಚಿತರು ಕಾರೊಂದನ್ನು ನಿಲ್ಲಿಸಿ ಹೋಗಿದ್ದು, ಯಾರೂ ಸಹ ಪತ್ತೆಯಿರಲಿಲ್ಲ. ಇದರಿಂದ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಹೆದ್ದಾರಿ ಗಸ್ತು ಸಿಬ್ಬಂದಿ ಕಾರನ್ನು ಪರಿಶೀಲನೆ ಮಾಡಿದ್ದಾರೆ.

ಬೆಂಗಳೂರು ನೋಂದಣಿ ಹೊಂದಿರುವ ಹುಂಡೈ ಕ್ರೆಟ್ಟಾ ಕಾರು ಇದಾಗಿದೆ. ಕಾರಿನ ಬಾಗಿಲು ತೆಗೆದು ಒಳಗೆ ಪರಿಶೀಲಿಸಿದಾಗ 1 ಕೋಟಿ ರೂಪಾಯಿ ಇರುವುದು ಕಂಡುಬಂದಿದೆ. ಕಾರಿನಲ್ಲಿ ಬೇರೆ ಯಾವುದೇ ದಾಖಲೆ ಪತ್ರಗಳು ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಬಳಿಕ ಹೆದ್ದಾರಿ ಗಸ್ತು ಸಿಬ್ಬಂದಿ ಹಣದ ಸಹಿತ ಕಾರನ್ನು ಅಂಕೋಲಾ ಪೊಲೀಸ್ ಠಾಣೆಗೆ ತಂದು ನಿಲ್ಲಿಸಿದ್ದಾರೆ. ಸದ್ಯ ಕಾರಿನ ಮಾಲೀಕರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಕಾರು ಹಾಗೂ ಅದರಲ್ಲಿದ್ದ ಹಣ ಯಾರಿಗೆ ಸೇರಿದ್ದು, ನಿರ್ಜನ ಪ್ರದೇಶದಲ್ಲಿ ಕಾರನ್ನು ತಂದು ನಿಲ್ಲಿಸಿದ್ದು ಏಕೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ