Breaking News

ಶ್ರೀವೀರಭದ್ರೇಶ್ವರ ದರ್ಶನ ಪಡೆದರೆ ಕುಂಭ ಮೇಳಕ್ಕೆ ಹೋಗಿ ಬಂದಂತೆ;ಮಹಾಂತೇಶ ಕವಟಗಿಮಠ

Spread the love

ಶ್ರೀವೀರಭದ್ರೇಶ್ವರ ದರ್ಶನ ಪಡೆದರೆ ಕುಂಭ ಮೇಳಕ್ಕೆ ಹೋಗಿ ಬಂದಂತೆ;ಮಹಾಂತೇಶ ಕವಟಗಿಮಠ
ಚಿಕ್ಕೋಡಿ: ನಾವು ಮಾಡುವ ಕೆಲಸದಲ್ಲಿ ಪ್ರಾಮಾಣಿಕತೆ, ನಿಸ್ವಾರ್ಥ ಭಾವನೆ ಕೂಡಿದರೆ ಅದೇ ಧರ್ಮ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.
ಅವರು ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರು ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀಶೈಲ ಜಗದ್ಗುರು ಡಾ! ಚನ್ನ ಸಿದ್ದರಾಮಯ್ಯ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಧರ್ಮ ಜಾಗೃತಿ ಹಾಗೂ ಸಾಂಸ್ಕೃತಿಕ ಸಮಾರಂಭ ದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮಾನವ ತನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ಮಾಡುವುದೇ ಧರ್ಮ. ಧರ್ಮದ ಕಾರ್ಯವನ್ನು ನಾವು ಪ್ರಾಮಾಣಿಕವಾಗಿ ಮಾಡುತ್ತವೆ ಅಥವಾ ಇಲ್ಲವೋ ಎಂಬುದು ಧರ್ಮ ಜಾಗೃತಿ ಕಾರ್ಯಕ್ರಮದ ಮೂಲಕ ಚರ್ಚೆ ಅವಶ್ಯಕತೆ ಎಂದರು.
ವಿಧಾನ ಪರಿಷತ್ತಿನ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ ದಕ್ಷಿಣದ ಕಾಶಿ ಎಂದೇ ಪ್ರಸಿದ್ಧಿಯನ್ನು ಪಡೆದಿರುವ ಯಡೂರು ಕ್ಷೇತ್ರವು ಅತ್ಯಂತ ವೇಗಗತಿಯಲ್ಲಿ ಅಭಿವೃದ್ಧಿಯನ್ನು ಕಾಣುತ್ತಿದೆ. ಪ್ರಯಾಗ ರಾಜ್ ಕುಂಭಮೇಳವು ಅತ್ಯಂತ ವೈಭವ ಪೂರಕವಾಗಿ ನಡೆಯುತ್ತಿದೆ. ಆದರೆ ನಮಗೆ ಕುಂಭ ಮೇಳವನ್ನು ನೋಡುವುದಕ್ಕೆ ಆಗಲಿಲ್ಲ ಎಂದರೆ ಯಡೂರಿನಲ್ಲಿ ವೀರಭದ್ರೇಶ್ವರ ದರ್ಶನವನ್ನು ಪಡೆದರೆ ಪ್ರಯಾಗರಾಜಕ್ಕೆ ಹೋಗಿಬಂದಂತೆ ಎಂದರು.ಪಾವನ ಸಾನಿಧ್ಯವಹಿಸಿದ್ದ ಶ್ರೀಶೈಲ್ ಜದ್ಗುರುಗಳು,ಜಮಖಂಡಿ ಶಾಸಕರಾದ ಜಗದೀಶ ಗುಡಗುಂಟಿಯವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ