Breaking News

ಪಠ್ಯ ಕೈಬಿಟ್ಟರಷ್ಟೇ ಸಾಲದು, ಆ ಲೇಖಕನಿಗೆ ಗುಂಡು ಹೊಡೆಯಬೇಕು ಎಂದ ಪ್ರಮೋದ್ ಮುತಾಲಿಕ್

Spread the love

ಧಾರವಾಡ, ಜನವರಿ 31: ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದ (Karnataka University) ಬಿಎ ಪದವಿ ಪುಸ್ತಕದಲ್ಲಿನ ಪಠ್ಯ ಕೈಬಿಟ್ಟರಷ್ಟೇ ಸಾಲದು, ಸಂಬಂಧಿಸಿದವರ ಮೇಲೆ ಕ್ರಮ ಆಗಬೇಕು. ಆ ಲೇಖಕನಿಗೆ ಗುಂಡು ಹೊಡೆಯಬೇಕು.

ಭಾರತ ಮಾತೆಯ ಬಗ್ಗೆ ಅಪಮಾನ ಮಾಡಿದವರಿಗೆ ಕ್ಷಮೆ ‌ಇಲ್ಲ. ಅಕ್ಷಮ್ಯ ಅಪರಾಧ ಆಗಿದೆ. ಹೀಗಾಗಿ ಕ್ರಮ ಆಗಲೇಬೇಕು. ಇಲ್ಲದೇ ಹೋದಲ್ಲಿ ಹೋರಾಟ ಮುಂದುವರೆಯುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಾಗ್ದಾಳಿ ಮಾಡಿದ್ದಾರೆ.

ಕವಿವಿಯಲ್ಲಿ ನಡೆದ ಪುಷ್ಪ ನಮನ ಕಾರ್ಯಕ್ರಮ ಬಳಿಕ ಮಾತನಾಡಿದ ಅವರು, ಕವಿವಿಯಲ್ಲಿ ಅತ್ಯಂತ ಅವಮಾನಕರ ಘಟನೆ ಆಗಿದೆ. ಇದೊಂದು ಕಳಂಕದ ರೀತಿಯ ಘಟನೆ. ಬೆಳಗು-1 ರ ಪಠ್ಯ ವಿವಾದ ಆಗಿದೆ. ಭಾರತ ಮಾತಾ ಕೀ ಜೈ ಶಬ್ದಕ್ಕೆ ಅಪನಂಬಿಕೆ ಮೂಡಿಸುವ ಪಾಠ ಹಾಕಿದ್ದಾರೆ. ನಾನು ಈ ಸಂಬಂಧ ವಿಸಿ ಅವರಿಗೂ ಮನವಿ ಕೊಟ್ಟಿದ್ದೇನೆ ಎಂದಿದ್ದಾರೆ.

ಪಾಠಗಳನ್ನು ನಾಲ್ಕು ಜನ ಪರಿಷ್ಕರಣೆ ಮಾಡುತ್ತಾರಂತೆ. ಸಂಪಾದಕೀಯ ಮಂಡಳಿ ಇದೆ. ಆ ನಾಲ್ಕು ಜನರ ಕಣ್ಣಿಗೆ ಇದು ಗೊತ್ತಾಗಲಿಲ್ಲವಾ? ಈ ರೀತಿಯ ಅಪಚಾರ ಮಹಾಅಪರಾಧ. ಇದು ದೇಶದ್ರೋಹಕ್ಕೆ ಸಮಾನವಾಗಿರೋದು. ಇದು ತುಕಡೆ ಗ್ಯಾಂಗ್​ನ ಕೆಲಸ. ಎಲ್ಲ ವಿವಿಗಳಲ್ಲಿ ತುಕಡೆ ಗ್ಯಾಂಗ್​ನವರು ಇದ್ದಾರೆ. ಎಲ್ಲ ಕಡೆ ಈ ರೀತಿಯ ವಿಕೃತವಾದಿಗಳು ಇದ್ದಾರೆ. ಅಂತಹ ಒಬ್ಬ ಮಾತ್ರವಲ್ಲ, ಒಂದು ತಂಡ ಕವಿವಿದಲ್ಲಿಯೂ ಇದೆ. ಇವರದ್ದು ಚೀನಾ ಡಿಎನ್‌ಎ. ಇವರ ಮಾನಸಿಕತೆ ಕಂಡು ಹಿಡಿಯಬೇಕು ಎಂದು ಕಿಡಿಕಾರಿದ್ದಾರೆ.

ಭಾರತ ಮಾತಾ ಕೀ ಜೈ ಅಂದರೆ ಏಕತೆ. ಇದು ಯಾವುದೇ ಜಾತಿ ಸೂಚಕ ಅಲ್ಲ. ಯಾವುದೇ ಭಾಷಾ ಸೂಚಕ ಅಲ್ಲ. ತಾಯಿ ಬಗ್ಗೆಯೇ ಅಪನಂಬಿಕೆಯಾ? ತಾಯಿ ಬಗ್ಗೆಯೇ ಅಪಪ್ರಚಾರವಾ? ಇದು ಬಹಳ ದೊಡ್ಡ ಅಪರಾಧ. ರಾಜ್ಯಪಾಲರಿಗೂ ಕ್ರಮಕ್ಕೆ ಆಗ್ರಹಿಸುತ್ತೇವೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ