Breaking News

ಭಾರತ ಬಹುತ್ವದ ಪ್ರಜಾಪ್ರಭುತ್ವವಾದಿ ದೇಶ: ಒಂದು ದರ್ಮದ ರಾಷ್ಟ್ರ ಮಾಡಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Spread the love

ಕೊಡಗು : ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು.

ಅವರು ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಆಯೋಜಿಸಲಾಗಿದ್ದ ಭಾಗಮಂಡಲದ ಹತ್ತಿರ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು –ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲು ಸೇತುವೆ ಉದ್ಘಾಟಿಸಿ ಮಾತನಾಡಿದರು.

ಎಲ್ಲಾ ಧರ್ಮಗಳು, ಜನರು, ಜಾತಿಗಳೂ ಕೂಡ ಸಮಾನ. ಅದಕ್ಕಾಗಿಯೇ ಸಂವಿಧಾನದಲ್ಲಿ ಸಹಿಷ್ಣುತೆ ಹಾಗೂ ಸಹಬಾಳ್ವೆ ಇರಬೇಕು ಎಂದಿರುವುದು. ನಮ್ಮ ಧರ್ಮವನ್ನು ಪ್ರೀತಿಸಿ ಗೌರವಿಸಬೇಕು. ಆದರೆ ಇನ್ನೊಂದು ಧರ್ಮವನ್ನು ಅಲ್ಲಗಳೆಯಬಾರದು. ಅದನ್ನೇ ಸಹಿಷ್ಣುತೆ ಎನ್ನುತ್ತಾರೆ. ಸಹಿಸ್ಣುತೆ ಇದ್ದಾಗ ಮಾತ್ರ ನಾವು ಮಾನವರಾಗಿ ಬಾಳಲು ಸಾಧ್ಯವಾಗುತ್ತದೆ. ಕುವೆಂಪು ಅವರು ಹುಟ್ಟುವಾಗ ಎಲ್ಲರೂ ವಿಶ್ವ ಮಾನವರಾಗಿರುತ್ತಾರೆ, ಬೆಳೆಯುತ್ತಾ ಅಲ್ಪಮಾನವರಾಗುತ್ತಾರೆ ಎಂದು ಹೇಳಿದ್ದರು. ನಾವೆಲ್ಲರೂ ವಿಶ್ವಮಾನವರಾಗುವ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ