Breaking News

ಉತ್ತರ ಕನ್ನಡದಲ್ಲೂ ಜೋರಾದ ಮೈಕ್ರೋ ಫೈನಾನ್ಸ್ ಹಾವಳಿ

Spread the love

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿಯೂ ಮೈಕ್ರೋ ಫೈನಾನ್ಸ್ ದಂಧೆಕೋರರ ವ್ಯವಹಾರ ಜೋರಾಗಿದೆ. ಜಿಲ್ಲೆಯ ಹಳಿಯಾಳ, ಮುಂಡಗೋಡ ಹಾಗೂ ಯಲ್ಲಾಪುರದ ಕೆಲವೆಡೆ ಈ ಮೀಟರ್ ಬಡ್ಡಿ ದಂಧೆಗೆ ಸಿಲುಕಿರುವವರು ಶೇ.30ರಷ್ಟು ಬಡ್ಡಿಕಟ್ಟಿದರೂ ಅಸಲು ಚುಕ್ತಾ ಮಾಡಲು ಸಾಧ್ಯವಾಗದೇ ಕೆಲವರು ಊರನ್ನೇ ತೊರೆಯುವ ಹಂತಕ್ಕೆ ತಲುಪಿರುವುದು ಬೆಳಕಿಗೆ ಬಂದಿದೆ.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್​​​​ ಹಾವಳಿ ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಜಾರಿಗೆ ಮುಂದಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 20, 30 ಸಾವಿರ ಸಾಲ ನೀಡಿ ಖಾಲಿ ಚೆಕ್​ಗೆ ಸಹಿ ಹಾಕಿಸಿಕೊಂಡು ಬಡ್ಡಿ, ಅಸಲು ಹಣ ಪಡೆದು ಕೊನೆಗೆ ಮತ್ತೆ ಹಣಕ್ಕೆ ಬೇಡಿಕೆ ಇಡುವ ಕೆಲವು ಫೈನಾನ್ಸ್​​ಗಳು ಕಾಲಿ ಚೆಕ್ ಬಳಸಿ ಸಾಲ ಪಡೆದವರಿಗೆ ಕೋರ್ಟ್​ನಲ್ಲಿ ಪ್ರಕರಣ ದಾಖಲಿಸುವ ಬೆದರಿಕೆ ಒಡ್ಡುತ್ತಿವೆ.

ದಾಂಡೇಲಿಯ ಹಸೀನಾ ಶೇಖ್​​ ಎಂಬುವವರು ಫೈನಾನ್ಸ್​​ನಲ್ಲಿ ಸಾಲ ಪಡೆದು ಬಡ್ಡಿ ಅಸಲು ಕಟ್ಟಿದ್ದರೂ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಇದೀಗ ಈ ಮಹಿಳೆ ಗ್ರಾಮ ತೊರೆದಿದ್ದಾಳೆ. ವಿಡಿಯೋ ಮಾಡಿ ನೋವು ತೋಡಿಕೊಂಡಿದ್ದು, ಮುಖ್ಯಮಂತ್ರಿಗಳಿಗೆ ತಮಗೆ ಸಹಾಯ ಮಾಡುವಂತೆ ಮನವಿ ಮಾಡಿದ್ದಾಳೆ.

“ಹಳಿಯಾಳ, ದಾಂಡೇಲಿ, ಜೋಯಿಡಾ ಭಾಗದಲ್ಲಿ ಮೈಕ್ರೋ ಫೈನಾನ್ಸ್​​ ದಂಧೆ ಕರಾಳವಾಗಿ ನಡೆಯುತ್ತಿದೆ. ಎಂಒಬಿ ಲೀಸ್ಟ್​ನಲ್ಲಿರುವ ರೌಡಿಗಳೇ ಇದರ ಕಿಂಗ್​​ಫಿನ್​​​ಗಳಾಗಿದ್ದು, ಪುಡಿ ರೌಡಿಗಳನ್ನು ಸಾಲ, ಬಡ್ಡಿ ವಸೂಲಿಗೆ ಬಿಡುತ್ತಿದ್ದಾರೆ. ಹಗಲು ರಾತ್ರಿ ಎನ್ನದೇ ಮನೆಗೆ ನುಗ್ಗಿ ಸಾಲ ವಸೂಲಿಗೆ ಇಳಿಯುತಿದ್ದು ಇದೀಗ ಸಾಲ ಪಡೆದವರು ಮನೆ ಬಿಡುವಂತಾಗಿದೆ. ಒಂದು ಕಾಲದಲ್ಲಿ ತಿನ್ನಲು ಏನು ಇಲ್ಲದಂತೆ ಸುತ್ತಾಡುತ್ತಿದ್ದವರು ಇದೀಗ ಈ ವ್ಯವಹಾರದಲ್ಲಿ ತೊಡಗಿಕೊಂಡು ಬಡವರ ರಕ್ತ ಹೀರುತ್ತಿದ್ದಾರೆ. ಚೆಕ್​ ಬೌನ್ಸ್​ ಪ್ರಕರಣಗಳನ್ನು ಕೋರ್ಟ್​ನಲ್ಲಿ ಹಾಕಿ ಹಣ ವಸೂಲಾತಿ ಮಾಡುತ್ತಿದ್ದಾರೆ. ಅಲ್ಲದೇ 20-40 ಪರ್ಸೆಂಟ್​ವರೆಗೂ ಬಡ್ಡಿ ವಸೂಲಾತಿ ಮಾಡುತ್ತಿದ್ದಾರೆ. ಈ ಬಗ್ಗೆ ದೂರು ದಾಖಲಾದರೂ ಯಾವುದೇ ಕ್ರಮವಾಗಿಲ್ಲ. ಇನ್ನಾದರೂ ಈ ಬಗ್ಗೆ ಇಲಾಖೆಗಳು ಎಚ್ಚೆತ್ತಕೊಳ್ಳಬೇಕು. ಈ ಬಗ್ಗೆ ಸೂಕ್ತ ತನಿಖೆ ಕೂಡ ನಡೆಸಬೇಕು” ಎಂದು ಸ್ಥಳೀಯ ಯೋಗರಾಜ್ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ