Breaking News

ದೆಹಲಿಯಲ್ಲಿ ಯತ್ನಾಳ್ ಬಣದಿಂದ ಅಂತಿಮ ಹಂತದ ಕದನ

Spread the love

ನವದೆಹಲಿ, (ಫೆಬ್ರವರಿ 03): ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಕಿತ್ತಾಟದಿಂದ ಆರಂಭವಾದ ಬಿಜೆಪಿ ಬಣ ಬಡಿದಾಟ ಜಿಲ್ಲಾಧ್ಯಕ್ಷರ ನೇಮಕದವರೆಗೂ ಬಂದು ನಿಂತಿದೆ.

ವಿಜಯೇಂದ್ರ ವಿರುದ್ಧ ಸಮರ ಸಾರಿರೋ ಯತ್ನಾಳ್ ಬಣ ದಿನಕ್ಕೊಂದು ಬಾಣ ಪ್ರಯೋಗಿಸ್ತಿದೆ. ಇಷ್ಟು ದಿನ ರಾಜ್ಯದಲ್ಲಿ ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ಅಸ್ತ್ರ ಪ್ರಯೋಗಿಸುತ್ತಿದ್ದ ಯತ್ನಾಳ್ ಆ್ಯಂಡ್ ಟೀಂ ದೆಹಲಿಗೆ ಶಿಫ್ಟ್ ಆಗಿದ್ದು, ವಿಜಯೇಂದ್ರ ವಿರುದ್ಧ ಹೈಕಮಾಂಡ್ ಮಟ್ಟದಲ್ಲಿ ಅಂತಿಮ ಹಂತದ ಪ್ರಹಾರಕ್ಕೆ ಮುಂದಾಗಿದೆ.

ಈಗಾಗಲೇ ಯತ್ನಾಳ್ ಟೀಂನ ಕೆಲ ಸದಸ್ಯರ ತಂಡ ದೆಹಲಿ ತಲುಪಿದ್ದು, ಯತ್ನಾಳ್ ಸೇರಿದಂತೆ ಇನ್ನಿತರ ನಾಯಕರು ನಾಳೆ(ಫೆಬ್ರವರಿ 04) ದಿಲ್ಲಿಗೆ ತೆರಳಲಿದ್ದಾರೆ. ಇನ್ನು ಮೊದಲ ತಂಡದಲ್ಲಿ ರಮೇಶ್ ಜಾರಕಿಹೋಳಿ, ಕುಮರಬಂಗಾರಪ್ಪ, ಶ್ರೀಮಂತ ಪಾಟೀಲ್. ಸಂತೋಷ್ ಎನ್ ಆರ್ ಸೇರಿ ಹಲವು ನಾಯಕರು ಇದ್ದು, ಅವರು ಇದೀಗ ಕರ್ನಾಟಕ ಭವನಕ್ಕೆ ಆಗಮಿಸಿದೆ.

ನಾಳೆ ಇನ್ನುಳಿದ ನಾಯಕರು ಬಂದ ಬಳಿಕ ಎಲ್ಲರೂ ಸೇರಿಕೊಂಡು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ