ಮೈಸೂರು: ಮೈಸೂರು ನಗರ ಸಿಸಿಬಿಯ ಎಸಿಪಿ ಸೇರಿ ಮೂವರು ಡಿವೈಎಸ್ಪಿ ವೃಂದದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಪೊಲೀಸ್ ಇಲಾಖೆ ಆದೇಶಿಸಿದೆ.
ಸಿಐಡಿಯಲ್ಲಿದ್ದ ಮೊಹಮ್ಮದ್ ಶರೀಫ್ ರಾವುತರ್ ಅವರನ್ನು ಮೈಸೂರು ನಗರ ಸಿಸಿಬಿಯ ಎಸಿಪಿಯಾಗಿ, ರಾಜೇಂದ್ರ ಕೆ. ಅವರನ್ನು ದೇವರಾಜ ಉಪವಿಭಾಗದ ಎಸಿಪಿಯಾಗಿ ಮತ್ತು ಕೆಪಿಎ ಡಿವೈಎಸ್ಪಿಯಾಗಿದ್ದ ಶಿವಶಂಕರ್ ಎಂ. ಅವರನ್ನು ಮೈಸೂರು ನಗರ ಸಂಚಾರ ವಿಭಾಗದ ಎಸಿಪಿಯಾಗಿ ವರ್ಗಾಯಿಸಲಾಗಿದೆ.
ವರ್ಗಾಯಿಸಲಾದ ಸ್ಥಳದಲ್ಲಿ ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗಿ ವರದಿ ಮಾಡಿಕೊಳ್ಳುವಂತೆ ಆದೇಶಿಸಿಲಾಗಿದೆ. ಜೊತೆಗೆ ಇನ್ನು ನಿಯುಕ್ತಿಗೊಳಿಸದಿರುವ ಡಿವೈಎಸ್ಪಿ ವೃಂದದ ಅಧಿಕಾರಿಗಳು ಮುಂದಿನ ಸ್ಥಳ ನಿಯುಕ್ತಿಗಾಗಿ ಪೊಲೀಸ್ ಪ್ರಧಾನ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಆಡಳಿತ ಎಡಿಜಿಪಿ ಸೌಮೇಂದು ಮುಖರ್ಜಿ ಆದೇಶದಲ್ಲಿ ತಿಳಿಸಿದ್ದಾರೆ.

Laxmi News 24×7