Breaking News

‘ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ’ ಎಲ್ಲ ದರ ಏರಿಸಿದೆ ; ಬಸವರಾಜ ಬೊಮ್ಮಾಯಿ ಕಿಡಿ

Spread the love

ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಮೆಟ್ರೋ‌ ದರ ಏರಿಕೆ ಮಾಡಿದ್ದು ಕೇಂದ್ರ ಸರಕಾರ ಅಲ್ಲ, ರಾಜ್ಯ ರ್ಕಾರವೇ ದರ ಏರಿಕೆಗೆ ಪ್ರಸ್ತಾಪ ಮಾಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ.

ಮೆಟ್ರೋ ದರ ನಿಗದಿ ಮಾಡುವ ಒಂದು ಸಮಿತಿ ಇದೆ. ಈ‌ ಮೆಟ್ರೋ ದರ ವಿಚಾರದಲ್ಲಿ ಎಲ್ಲವೂ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯದ ಅಧಿಕಾರಿಗಳು ಇರುತ್ತಾರೆ. ಅದಕ್ಕೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದರ ಏರಿಕೆ ವಿಚಾರವಾಗಿ‌ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ. ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಅದಕ್ಕೆ ಎಲ್ಲ ದರಗಳನ್ನೂ ಏರಿಸುತ್ತಿದೆ. ವಿದ್ಯುತ್, ನೀರು, ಹಾಲಿನ‌ ದರ ಸೇರಿದಂತೆ ಎಲ್ಲ ದರ ಏರಿಸಿದೆ ಎಂದು ಟೀಕಿಸಿದರು.


Spread the love

About Laxminews 24x7

Check Also

ಹುಬ್ಬಳ್ಳಿ- ಧಾರವಾಡ ಮಧ್ಯೆ ಮೆಟ್ರೋ ಮಾದರಿ ಸಾರಿಗೆ ಯೋಜನೆ ಒಡಂಬಡಿಕೆ

Spread the loveಹುಬ್ಬಳ್ಳಿ, ಏಪ್ರಿಲ್​ 12: ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ನಡುವೆ ವಿದ್ಯುತ್‌ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ (Electric Rapid …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ