ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲವೆಂಬ ಬಿಜೆಪಿಗರ ಆರೋಪ
ಸಚಿವ ಸತೀಶ ಜಾರಕಿಹೊಳಿ ನೀಡಿದ್ರು ತಿರುಗೇಟು…
ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ಅಧಿಕಾರಿಗಳಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂಬ ಬಿಜೆಪಿಗರ ಆರೋಪಕ್ಕೆ ಸಚಿವ ಸತೀಶ ಜಾರಕಿಹೊಳಿ ಅವರು ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಬೊಕ್ಕಸ ಖಾಲಿಯಾಗಿದ್ದು, ಸಂಬಳ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂಬ ಬಿಜೆಪಿಗರ ಟೀಕೆಗೆ ತಿರುಗೇಟು ನೀಡಿದ್ದಾರೆ.
ವೇತನ ಪಾವತಿಯಲ್ಲಿ ವಿಳಂಬವಾಗುವುದು ಹೊಸದೇನಿಲ್ಲ. ವೇತನವಾಗಲಿ, ಬಿಲ್ ಗಳಾಗಲಿ, ಎಲ್ಲ ಸರ್ಕಾರದ ಕಾಲದಲ್ಲಿಯೂ ವಿಳಂಬವಾದ ಸಾಕಷ್ಟು ಉದಾಹರಣೆಗಳಿವೆ ಎಂದಿದ್ದಾರೆ.
Laxmi News 24×7