Breaking News

ರಾಜ್ಯದ ವಾಹನಗಳಿಗೆ HSRP ಅಳವಡಿಕೆ ಡೆಡ್‌ಲೈನ್ ಮತ್ತೆ ವಿಸ್ತರಣೆ

Spread the love

ಬೆಂಗಳೂರು: ರಾಜ್ಯದ ಎಲ್ಲಾ ವರ್ಗಗಳ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ (ಅತಿಸುರಕ್ಷಿತ ನೋಂದಣಿ ಫಲಕ) ಅಳವಡಿಕೆ ಕಾಲಮಿತಿಯನ್ನು ಸಾರಿಗೆ ಇಲಾಖೆ ಮತ್ತೊಮ್ಮೆ ವಿಸ್ತರಿಸಿದೆ.

ರಾಜ್ಯದಲ್ಲಿ ಎಲ್ಲಾ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆ ಅವಧಿಯನ್ನು ಮಾರ್ಚ್​​ 31ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಆ ಮೂಲಕ ಸಾರಿಗೆ ಇಲಾಖೆ 7ನೇ ಬಾರಿಗೆ ಕಾಲಮಿತಿ ವಿಸ್ತರಣೆ ಮಾಡಿದೆ. ಏಪ್ರಿಲ್ 1, 2019ರ ಮುನ್ನ ನೋಂದಣಿಯಾದ ವಾಹನಗಳು ಕಡ್ಡಾಯವಾಗಿ ಹೆಚ್‌ಎಸ್‌ಆರ್‌ಪಿ ಅಳವಡಿಕೆ ಮಾಡಬೇಕು.

ಈ ಮುಂಚೆ ಜನವರಿ 31ರವರೆಗೆ ಕಾಲ ಮಿತಿಯನ್ನು ವಿಸ್ತರಿಸಲಾಗಿತ್ತು.‌ ಇದೀಗ ಮತ್ತೆ ಕಾಲಮಿತಿಯನ್ನು ಮಾರ್ಚ್​​ 31, 2025ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಹೆಚ್‌ಎಸ್‌ಆರ್‌ಪಿ ಸುರಕ್ಷಿತ ನಂಬರ್ ಪ್ಲೇಟ್ ಆಗಿದ್ದು, ದುರ್ಬಳಕೆ ತಪ್ಪಿಸಲು ವಿನ್ಯಾಸಗೊಳಿಸಲಾಗಿದೆ. ಹೆಚ್‌ಎಸ್‌ಆರ್‌ಪಿ ವಿಶಿಷ್ಟ 10 ಅಂಕಿಯ ನಂಬರ್ ಆಗಿದ್ದು, ವಾಹನದ ಚಾರ್ಸಿ ಹಾಗೂ ಇಂಜಿನ್ ವಿವರಕ್ಕೆ ಜೋಡಣೆಯಾಗಿದೆ.ಹೆಚ್‌ಎಸ್‌ಆರ್‌ಪಿ ಅಳವಡಿಕೆ ಡೆಡ್​​ಲೈನ್ ​​ಅನ್ನು ಹಲವು ಬಾರಿ ವಿಸ್ತರಣೆ ಮಾಡಲಾಗಿದೆ. 2023ರಂದು ಸಾರಿಗೆ ಇಲಾಖೆ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ಫಲಕ ಅಳವಡಿಕೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು. ರಾಜ್ಯ ಸಾರಿಗೆ ಇಲಾಖೆ ಈವರೆಗೆ ಈ ನಂಬರ್​ ಪ್ಲೇಟ್​ ಅಳವಡಿಕೆಗೆ 6 ಬಾರಿ ಡೆಡ್​​ಲೈನ್ ವಿಸ್ತರಿಸಲಾಗಿದೆ. ಆದರೂ ಸಹ ವಾಹನ ಮಾಲೀಕರು ತಮ್ಮ ವಾಹನಕ್ಕೆ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಸಿಕೊಂಡಿಲ್ಲ. ಹೀಗಾಗಿ, ರಾಜ್ಯ ಸಾರಿಗೆ ಇಲಾಖೆ ಈಗ ಮತ್ತೊಂದು ಅವಕಾಶ ನೀಡಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ