Breaking News

ಕನ್ನಡ ಕಡೆಗಣಿಸಿ ಮರಾಠಿಯಲ್ಲಿ ಮಾತ್ರ ಅಳವಡಿಸಿದ ನಾಮಫಲಕಗಳನ್ನು ತೆರವುಗೊಳಿಸಿದ ಕಿತ್ತೂರು ಕರ್ನಾಟಕ ಸೇನೆ.

Spread the love

ಕನ್ನಡ ಕಡೆಗಣಿಸಿ ಮರಾಠಿಯಲ್ಲಿ ಮಾತ್ರ ಅಳವಡಿಸಿದ ನಾಮಫಲಕಗಳನ್ನು ತೆರವುಗೊಳಿಸಿದ ಕಿತ್ತೂರು ಕರ್ನಾಟಕ ಸೇನೆ.

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಗಡಿ ಗ್ರಾಮ ಮಾಣಕಾಪೂರ ಗ್ರಾಮ ಪಂಚಾಯಿತಿಯಲ್ಲಿ ಕನ್ನಡ ಕಡೆಗಣಿಸಿ ಮರಾಠಿಯಲ್ಲಿ ಮಾತ್ರ ಅಳವಡಿಸಿದ ನಾಮಫಲಕಗಳನ್ನು ತೆರವುಗೊಳಿಸಿದ ಕಿತ್ತೂರು ಕರ್ನಾಟಕ ಸೇನೆ.

ಮಾಣಕಾಪೂರ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಮತ್ತು ಆಡಳಿತ ಮಂಡಳಿ ಪಂಚಾಯಿತಿಯ ಪಿಡಿಓ, ಕಾರ್ಯದರ್ಶಿ, ಅಧ್ಯಕ್ಷ -ಉಪಾಧ್ಯಕ್ಷರಗಳ ಕೊಠಡಿಗಳಿಗೆ ಅಳವಡಿಸಿದ ನಾಮಫಲಕಳೆಲ್ಲವೂ ಮರಾಠಿಯಲ್ಲಿ ಮಾತ್ರ ಅಳವಡಿಸಿದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕಿತ್ತೂರು ಕರ್ನಾಟಕ ಸೇನೆಯ ಪದಾಧಿಕಾರಿಗಳು ನೇರವಾಗಿ ಪಂಚಾಯತಿ ಕಛೇರಿಗೆ ಮುತ್ತಿಗೆ ಹಾಕಿ ಪ್ರತಭಟಿಸಿದ ಕಿತ್ತೂರು ಕರ್ನಾಟಕ ಸೇನೆಯ ಪದಾಧಿಕಾರಿಗಳು ಮರಾಠಿಯಲ್ಲಿ ಅಳವಡಿಸಿದ ನಾಮಫಲಕಗಳನ್ನು ತೆರವುಗೊಳಿಸುವವರೆಗೂ ಪ್ರತಿಭಟನೆ ಮುಂದುವರೆಸಿ ಮರಾಠಿಯಲ್ಲಿರುವ ನಾಮಫಲಕಗಳನ್ನು

ತೆರವುಗೊಳಿಸಿದ ನಂತರ ಪ್ರತಿಭಟನೆ ಹಿಂಪಡೆದರು.ಈ ಸಂದರ್ಭದಲ್ಲಿ ಕಿತ್ತೂರು ಕರ್ನಾಟಕ ಸೇನೆಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಅಧ್ಯಕ್ಷ ನಾಗೇಶ್ ಮಾಳಿ, ಜಿಲ್ಲಾ ಸಂಚಾಲಕ ಸಾಹುಕಾರ ಬಸ್ತವಾಡೆ, ಕಾಗವಾಡ ತಾಲೂಕಾ ಅಧ್ಯಕ್ಷ ರವಿ ಪಾಟೀಲ, ಚಿಕ್ಕೋಡಿ ತಾಲೂಕಿನ ಉಪಾಧ್ಯಕ್ಷ ರಾಮಾ ಹಂಡೆ ಮತ್ತು ಸೂರಜ್ ಕೋರೆ ಇತರರು ಭಾಗವಹಿಸಿದ್ದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ