Breaking News
Home / ಜಿಲ್ಲೆ / ಹಬ್ಬಳ್ಳಿ / ಕೊರೊನಾಗೆ ಹೆದರಿ ಪರೀಕ್ಷೆಗೆ ಹಾಜರಾಗದೆ ಮನೆಯಲ್ಲಿ ಕುಳಿತಿದ್ದ ವಿದ್ಯಾರ್ಥಿನಿ

ಕೊರೊನಾಗೆ ಹೆದರಿ ಪರೀಕ್ಷೆಗೆ ಹಾಜರಾಗದೆ ಮನೆಯಲ್ಲಿ ಕುಳಿತಿದ್ದ ವಿದ್ಯಾರ್ಥಿನಿ

Spread the love

ಧಾರವಾಡ: ಕೊರೊನಾಗೆ ಹೆದರಿ ಪರೀಕ್ಷೆಗೆ ಹಾಜರಾಗದೆ ಮನೆಯಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಕರು ಹಾಗೂ ಅಧಿಕಾರಿಗಳು ಮನವೊಲಿಸಿ, ಪರೀಕ್ಷೆ ಬರೆಸಿದ್ದಾರೆ.

ಧಾರವಾಡದ ಅಳ್ನಾವರ ತಾಲೂಕಿನ ವಿದ್ಯಾರ್ಥಿನಿ ನಿರೀಕ್ಷಾ(ಹೆಸರು ಬದಲಿಸಲಾಗಿದೆ) ಕೊರೊನಾ ಭಯದಿಂದ ದ್ವಿತೀಯ ಭಾಷೆ ಪರೀಕ್ಷೆಗೆ ಗೈರಾಗಿದ್ದಳು. ಪಾಲಕರು ಸಹ ಏನೂ ಮಾತನಾಡಿರಲಿಲ್ಲ. ಆದರೆ ಪರೀಕ್ಷೆಗೆ ಗೈರಾಗಿದ್ದನ್ನು ಗಮನಿಸಿದ ಶಿಕ್ಷಕರು ಹಾಗೂ ಅಧಿಕಾರಿಗಳು, ಇಂದು ಬಾಲಕಿ ಮನೆಗೆ ತೆರಳಿ ವಿದ್ಯಾರ್ಥಿನಿ ಹಾಗೂ ಪೋಷಕರನ್ನು ಮನವೊಲಿಸಿದ್ದಾರೆ. ಅಧಿಕಾರಿಗಳ ಮನವೊಲಿಕೆ ಬಳಿಕ ಅಳ್ನಾವರದ ಕಸ್ತೂರಬಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿ ಇಂದು ಗಣಿತ ಪರೀಕ್ಷೆ ಬರೆದಿದ್ದಾಳೆ.

ಮೊದಲ ದಿನ ನಿರೀಕ್ಷಾ ಪರೀಕ್ಷೆಗೆ ಗೈರಾಗಿದ್ದನ್ನು ಮನಗಂಡ ಅಧಿಕಾರಿಗಳು, ಇಂದು ಖುದ್ದು ಅವರ ಮನೆಗೆ ತೆರಳಿ ಪೋಷಕರು ಹಾಗೂ ನಿರೀಕ್ಷಾ ಮನವೊಲಿಸಿದ್ದಾರೆ. ಹೀಗಾಗಿ ಇಂದು ಗಣಿತ ಪರೀಕ್ಷೆ ಬರೆದಿದ್ದಾರೆ. ಶಿಕ್ಷಕರು ಮತ್ತು ಅಧಿಕಾರಿಗಳ ಈ ಕಾರ್ಯಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ – ಧಾರವಾಡ ಅರ್ಧ ದಿನ ಬಂದ್!

Spread the loveಧಾರವಾಡ: ಇಡೀ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ