Breaking News

ಗದಗಿನಲ್ಲೊಂದು ಭೀಕರ ಅಪಘಾತ: ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ, ಮೂವರು ದುರ್ಮರಣ

Spread the love

ಗದಗ, : ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣ (death) ಹೊಂದಿರುವಂತಹ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ನಿಂಗಪ್ಪ ಮಾದರ, ಯಮನಪ್ಪ ಮತ್ತು ಮಂಜುನಾಥಗೌಡ ಮೃತರು. ಅಪಘಾತದ ಬಳಿಕ ವಾಹನದ ಸಮೇತ ಚಾಲಕ ಎಸ್ಕೇಪ್ ಆಗಿದ್ದಾನೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಮೊಮ್ಮಗ-ಅಜ್ಜಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಮಂಜಲ್ಪಡ್ಪು ಎಂಬಲ್ಲಿ ಕೆಎಸ್​ಆರ್​ಟಿಸಿ ಬಸ್ ಮತ್ತು‌ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆಟೋ ದಲ್ಲಿದ್ದ ಮೊಮ್ಮಗ-ಅಜ್ಜಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಆಟೋ ಚಾಲಕನಿಗೆ ಗಂಭೀರ ಗಾಯವಾಗಿದೆ. ಜಮೀಲಾ (49), ತಮ್ಸೀರ್(4) ಮೃತ ದುರ್ದೈವಿಗಳು.

ಮಂಗಳೂರಿನಿಂದ ಪುತ್ತೂರಿಗೆ ಕೆಎಸ್​ಆರ್​ಟಿಸಿ ಬಸ್​​ ಬರುತ್ತಿದ್ದು, ಪುತ್ತೂರಿನಿಂದ ಕಬಕ ಕಡೆಗೆ ಆಟೋ ಹೋಗುತ್ತಿತ್ತು. ಕೆದಂಬಾಡಿಯ ಮಹಮ್ಮದ್ ಎಂಬವರು ಆಟೋ‌ ಚಲಾಯಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದೆ. ಎದುರಿಗೆ ಬರುತ್ತಿದ್ದ ಬಸ್​​ಗೆ ಆಟೋ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಮಹಮ್ಮದ್ ಪತ್ನಿ ಜಮೀಳಾ ಹಾಗೂ ಮೊಮ್ಮಗ ತಮ್ಸೀರ್ ಸಾವನ್ನಪ್ಪಿದ್ದಾರೆ. ಅಪಘಾತದ ಭೀಕರ ದೃಶ್ಯ‌ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪುತ್ತೂರು‌ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿವೈಡರ್​​ಗೆ ಡಿಕ್ಕಿಯಾಗಿ ಎದುರಿಗೆ ಬರ್ತಿದ್ದ ಲಾರಿಗೆ ಕಾರು ಡಿಕ್ಕಿ: ಐವರು ಅದೃಷ್ಟವಶಾತ್ ಪಾರು

ಡಿವೈಡರ್​​ಗೆ ಡಿಕ್ಕಿಯಾಗಿ ಎದುರಿಗೆ ಬರ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಐವರು ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ರಾಮೇಶ್ವರ ಗೇಟ್ ಬಳಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ