ರಜೆಗೆ ಬಂದಿದ್ದ ಬಿಎಸ್ಎಫ್ ಯೋಧ ಅನಾರೋಗ್ಯಕ್ಕೆ ತುತ್ತಾಗಿ ಸಾವು:
ಗಣ್ಯರ ಸಂತಾಪ
ರಜೆಗೆ ಬಂದಿದ್ದ ಬಿಎಸ್ಎಫ್ ಯೋಧ ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಬೊಮ್ಮನಜೋಗಿಯಲ್ಲಿ ನಡೆದಿದೆ.
ಮಲ್ಲು ಪೂಜಾರಿ ನಿಧನ ಹೊಂದಿದ ಯೋಧ. ಜಮ್ಮು-ಕಾಶ್ಮೀರದಲ್ಲಿ ಬಿಎಸ್ಎಫ್ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಲ್ಲು ಕಳೆದ ವಾರ ರಜೆ ನಿಮಿತ್ತ ಸ್ವಗ್ರಾಮ ಬೊಮ್ಮನಜೋಗಿಗೆ ಆಗಮಿಸಿದ್ದ. ಆದ್ರೆ ಅಚಾನಕ್ಕಾಗಿ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಸೊಲ್ಲಾಪುರ ಆಸ್ಪತ್ರೆಗೆ ದಾಖಲಾಗಿದ್ದ. ಇಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.
ಕಳೆದ 17 ವರ್ಷಗಳಿಂದ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ. ಅರುಣಾಚಲ ಪ್ರದೇಶ, ಕೊಲ್ಕತ್ತಾ, ಜಮ್ಮು-ಕಾಶ್ಮೀರದ ಲೇ ಲಡಾಖ್ ನಲ್ಲಿ ಕರ್ತವ್ಯ ನಿರ್ವಹಿಸಿದ್ದ. ಸಧ್ಯ ಯೋಧನ ನಿಧನಕ್ಕೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ..
Laxmi News 24×7