ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಧ್ಯಕ್ಷರೂ ಆಗಿರುವ ಶಾಸಕ ರುದ್ರಪ್ಪ ಲಮಾಣಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿಂದ ಹಾವೇರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರಿಂದ ಕೆಳಗಿಳಿದು ನಿಂತಿದ್ದ ರುದ್ರಪ್ಪ ಲಮಾಣಿ ಅವರಿಗೆ ಬೈಕ್ನಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬರು ಡಿಕ್ಕಿ ಹೊಡೆದಿದ್ದಾರೆ.
ಡಿಕ್ಕಿ ರಭಸಕ್ಕೆ ನೆಲಕ್ಕೆ ಬಿದ್ದ ಪರಿಣಾಮ ರುದ್ರಪ್ಪ ಲಮಾಣಿ ಅವರ ಹಣೆ, ಹಲ್ಲು ಮತ್ತು ಬಲ ಮೊಣಕಾಲಿಗೆ ಗಾಯವಾಗಿದೆ.
ತಕ್ಷಣಕ್ಕೆ ಹಿರಿಯೂರಲ್ಲಿ ಚಿಕಿತ್ಸೆ ಪಡೆದ ಅವರು, ಬಳಿಕ ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ.ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Laxmi News 24×7