Breaking News

ತುಬಚಿ-ಬಬಲೇಶ್ವರ ಏತ ನೀರಾವರಿ ಕಾಲುವೆಗೆ ಕೃಷ್ಣಾ ನದಿ ನೀರು…

Spread the love

ತುಬಚಿ-ಬಬಲೇಶ್ವರ ಏತ ನೀರಾವರಿ ಕಾಲುವೆಗೆ ಕೃಷ್ಣಾ ನದಿ ನೀರು…
ಧಾರವಾಡ- ವಿಜಯಪುರ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ
ತುಬಚಿ-ಬಬಲೇಶ್ವರ ಏತ ನೀರಾವರಿ ಕಾಲುವೆಗೆ ಕೃಷ್ಣಾ ನದಿ ನೀರು ಹರಿಸದಂತೆ ಆಗ್ರಹಿಸಿದ ಇಂದು ಚಿಕ್ಕಪಡಸಲಗಿ ಗ್ರಾಮದ ಬಳಿ ಧಾರವಾಡ- ವಿಜಯಪುರ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.
ಚಿಕ್ಕಪಡಸಲಗಿ ಗ್ರಾಮದ ಬಳಿ ಜಮಖಂಡಿ ತಾಲ್ಲೂಕಿನ ಚಿಕ್ಕಪಡಸಲಗಿ ಗ್ರಾಮದ ಬಳಿ ಧಾರವಾಡ- ವಿಜಯಪುರ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನೆಯನ್ನು ತಡೆಯಲು ಮುಂದಾದಾಗ ರೈತರು- ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಹೆದ್ದಾರಿ ಬಂದ್ ಮಾಡಿದ್ದರಿಂದಾಗಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ತಮ್ಮ ಬೆಂಬಲಕ್ಕೆ ನಿಲ್ಲುವಂತೆ ಆಗ್ರಹಿಸಿದರು. ಕಳೆದ 20 ವರ್ಷಗಳಿಂದ ನಮಗೆ ಅನ್ಯಾಯ ಆಗ್ತಿದೆ. ನೀರು ಹೆಚ್ಚಿದ್ದಾಗ ಬೇರೆ ಜಿಲ್ಲೆಗೆ ನೀರು ಹರಿಸಲಿ, ನಮಗೆ ನೀರು ಕಡಿಮೆ ಇದ್ದಾಗ ನಮ್ಮ ನೀರು ಬೇರೆ ಜಿಲ್ಲೆಗೆ ಹೋಗಬಾರದು ಎಂದರು.
ಈ ಸಂದರ್ಭದಲ್ಲಿ ನೂರಾರು ರೈತರು ಭಾಗಿಯಾಗಿದ್ಧರು.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ